8:33 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಭಾರೀ ಕಾರ್ಯಾಚರಣೆ: 3 ಕೋಟಿ ಮೌಲ್ಯದ 3.12 ಕೆಜಿ ಬ್ರೌನ್‌ ಶುಗರ್ ಪೊಲೀಸ್ ವಶಕ್ಕೆ; 3 ಮಂದಿ ಬಂಧನ

16/05/2022, 09:27

ಪಾಟ್ನಾ(reporterkarnataka.com):

ಮಾದಕ ದ್ರವ್ಯದ ವಿರುದ್ಧ ಒಡಿಶಾ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಒಡಿಶಾದ ಪುರಿಯ ಮಂಗಲ ಘಾಟ್‌ ಚಕ್ಕಾ ಪ್ರದೇಶದಲ್ಲಿ 3 ಕೋಟಿ ಬೆಲೆಬಾಳುವ ಸುಮಾರು 3 ಕೆಜಿ ಮಾದಕ ದ್ರವ್ಯವನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೋಲೀಸರು 3.12 ಕೆಜಿ ಮೌಲ್ಯದ ಬ್ರೌನ್‌ ಶುಗರ್‌ ಅನ್ನು ವಶಪಡಿಸಿಕೊಂಡಿದ್ದು ಮೂರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಒಡಿಶಾ ಪೋಲೀಸ್‌ ವಿಭಾಗದ ಸ್ಪೆಷಲ್‌ ಟಾಸ್ಕ್‌ ಫೋರ್ಸ್‌ ವತಿಯಿಂದ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತರನ್ನು ಸುಶಾಂತ್‌ ಪಟ್ನಾಯಕ್‌ ಅಲಿಯಾಸ್‌ ನಂದಾ, ರಾಜ್‌ ಕಿಶೋರ್‌ ಸಾಹೂ, ,ಮಾನಸ್‌ ಸಾಹೂ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಅಂತರ್‌ ಜಿಲ್ಲಾ ಡ್ರಗ್‌ ಪೂರೈಕೆದಾರರಾಗಿದ್ದರು ಎನ್ನಲಾಗಿದೆ. ಬಂಧಿತರಿಂದ 20 ಸಾವಿರ ನಗದು, ನಾಲ್ಕು ಮೊಬೈಲ್‌, ಒಂದು ಕ್ಯಾಶ್‌ ಕೌಂಟಿಂಗ್‌ ಮಸೀನ್‌ ಹಾಗೂ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಇದು ಇಲ್ಲಿಯವರೆಗಿನ ಒಡಿಶಾ ಪೋಲೀಸ್‌ ಕಾರ್ಯಾಚರಣೆಯಲ್ಲಿ ಅತಿ ದೊಡ್ಡದು ಎನ್ನಲಾಗಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು