3:07 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಬಿಎಸ್ಸಿ ಓದಲು ಇಷ್ಟವಿಲ್ಲ; ಡೆತ್ ನೋಟು ಬರೆದಿಟ್ಟು ಸ್ವಗೃಹದಲ್ಲಿ ವಿದ್ಯಾರ್ಥಿ ನೇಣಿಗೆ ಶರಣು

05/12/2022, 21:59

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದಲ್ಲಿ ಬಿಎಸ್ಸಿ ಓದಲು ಇಷ್ಟವಿಲ್ಲವೆಂದು ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾದ ಘಟನೆ ನಡೆದಿದೆ.

ತಡರಾತ್ರಿಯಲ್ಲಿ ನೇಣಿಗೆ ಶರಣಾದ ನಿಂಗಣ್ಣಾ (ಉರ್ಪ ಮಾರುತಿ) ಚಿದಾನಂದ ನಾವ್ಹಿ ವಯಸ್ಸು 22 ಎಂದು ತಿಳಿದು ಬಂದಿದೆ.

ಈತ ಜಮಖಂಡಿಯ ಬಿಎಲ್ ಡಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ ಮೂರು ದಿನಗಳ ಹಿಂದಷ್ಟೇ ಸ್ವ ಗ್ರಾಮವಾದ ಯಲ್ಪಾರಟ್ಟಿಗೆ ಆಗಮಿಸಿದ್ದ. ಆದರೆ ನಿನ್ನೆ ತಮ್ಮ ಸ್ವಂತ ಮನೆಯಲ್ಲಿ ತಡರಾತ್ರಿ ಮನೆಯ ಮುಂದೆ ಇರುವ ಛಾವಣಿಯಲ್ಲಿ ಮಲಗಿಕೊಂಡಾಗ ನಿಂಗಣ್ಣಾ ,(ಉರ್ಪ ಮಾರುತಿ) ನೇಣಿಗೆ ಶರಣಾಗಿದ್ದಾನೆ. ಬೆಳಿಗ್ಗೆ ಎದ್ದು ತಂದೆ ತಾಯಿ ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಡೇತ ನೋಟಿನಲ್ಲಿ ನನ್ನನು ಕ್ಷೇಮಿಸಿ ಬಿಡಿ,ನಂಗೆ BSC ಇಷ್ಟ ಇಲ್ಲ
ಮನಿ ಪರಿಸ್ಥಿತಿ ನೋಡಿ ನಾನೂ BSC ಮಾಡಿನಿ ಈಗ ನನಗೆ study pressure ಬಹಳ ಆಗೆತಿ. ಅದಕ್ಕೆ ನಾ ಸಾಯುತ್ತೆನೆ,Sorry papa Sorry mom ಎಂದು ಡೇತ್ ನೋಟ ಬರೆದಿಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಹಾರುಗೇರಿ ಪೊಲೀಸ್ ಠಾಣೆಯ ಪಿಎಸ್ಐ ರಾಘವೇಂದ್ರ ಖೋತ,ಸಿಬ್ಬಂದಿಗಳ ಜೊತೆಗೇ ಸ್ಥಳಕ್ಕೆ ಬೆಟ್ಟಿ ನೀಡಿ ಸ್ಥಳ ಪರಿಶೀಲಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಯುವಕನ ತಂದೆ ತಾಯಿಗಳಿಂದ ಮಾಹಿತಿ ಪಡೆದು ಪಂಚನಾಮೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು