2:59 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಬಿಎಸ್ಸೆನ್ನೆಲ್ ಟವರ್ ನಿರ್ಮಿಸಲು ಪಡೆದ ಹಣ ವಂಚನೆ: 36.70 ಲಕ್ಷ ಪರಿಹಾರ, 5 ಸಾವಿರ ದಂಡ ನೀಡಲು ಕೋರ್ಟ್ ಆದೇಶ

26/08/2022, 15:20

ಮಂಗಳೂರು(reporterkarnataka.com): ಬಿಎಸ್ಸೆನ್ನೆಲ್ ಟವರ್ ನಿರ್ಮಿಸಲೆಂದು
ಪಡೆದ 36 ಲಕ್ಷ ರೂ. ಹಣ ಹಿಂತಿರುಗಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಜೆಎಂಎಫ್ ಸಿ 5ನೇ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಆರೋಪಿಯು 36,70,000 ರೂ. ಪರಿಹಾರ ನೀಡುವಂತೆ ಆದೇಶ ನೀಡಿದೆ.

ಬಿಎಸ್ಸೆನ್ನೆಲ್ ಗುತ್ತಿಗೆದಾರರಾದ.ಮಂಗಳೂರಿನ ಮಠದಕಣಿ ಮಾರ್ವೆಲ್ಲ ಅಪಾರ್ಟ್ ಮೆಂಟಿನ ನಿವಾಸಿಯಾದ ಪ್ರಕಾಶ್ ವಿ. ನಾಯಕ್ ಅವರು ಪ್ರಿಯಾ ಎಸ್. ಭಂಡಾರಿ ಅವರಿಂದ ಬಿಎಸ್ಸೆನ್ನೆಲ್ ಟವರ್ ನಿರ್ಮಿಸಲು 36 ಲಕ್ಷ ರೂ. ಪಡೆದಿದ್ದರು. ನಂತರ ಪ್ರಕಾಶ್ ನಾಯಕ್ ಅವರು ಹಣ ಹಿಂತಿರುಗಿಸಲಿಲ್ಲ. ಅವರು ಕೊಟ್ಟ ಚೆಕ್ ಕೂಡ ಬೌನ್ಸ್ ಆಗಿತ್ತು. ಈ ಕುರಿತು ಪ್ರಿಯಾ ಭಂಡಾರಿ ಅವರು ಪ್ರಕಾಶ್ ನಾಯಕ್ ವಿರುದ್ಧ ವಿಶ್ವಾಸದ್ರೋಹ ಮತ್ತು ಮೋಸ ಮಾಡಿದ ಪ್ರಕರಣ ದಾಖಲಿಸಿದ್ದರು. ನೆಗೋಶಿಯೇಬಲ್ ಇನ್ ಸ್ಟ್ರುಮೆಂಟ್ ಆ್ಯಕ್ಟ್ ಪ್ರಕಾರ ಮಂಗಳೂರಿನ ಜೆಎಂ ಎಫ್ ಸಿ 5ನೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ಕುರಿತಂತೆ ಅನೇಕ ಸಾಕ್ಷ್ಯಾಧಾರಗಳನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಚಿನ್ಮಯಿ ಅವರು ಪ್ರಿಯಾ ಭಂಡಾರಿ ಅವರಿಗೆ ಆರೋಪಿ ಪ್ರಕಾಶ್ ನಾಯಕ್ ಅವರು 36,70,000 ರೂ. ಪರಿಹಾರ ಮತ್ತು 5 ಸಾವಿರ ದಂಡ ನೀಡುವಂತೆ ತೀರ್ಪು ನೀಡಿದ್ದಾರೆ. ಆರೋಪಿಯು ದಂಡ ಪಾವತಿಸಲು ವಿಫಲರಾದರೆ 6 ತಿಂಗಳು ಸಾಧಾರಣ ಜೈಲು ಶಿಕ್ಷೆಯನ್ನು ವಿಧಿಸಿದ್ದಾರೆ.

ಪ್ರಿಯಾ ಭಂಡಾರಿ ಅವರ ಪರವಾಗಿ ಹಿರಿಯ ವಕೀಲರಾದ ಆಶಾ ನಾಯಕ್ , ಜೀವನ್ ಕೊಲ್ಯ ಹಾಗೂ ಚೈತ್ರಾ ವಾದಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು