9:13 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

BSY Resignation | ಬಿಎಸ್‌ವೈ ರಾಜೀನಾಮೆ ಬಹುತೇಕ ಫಿಕ್ಸ್ : ಪರೋಕ್ಷವಾಗಿ ಸುಳಿವು ಬಿಟ್ಟುಕೊಟ್ಟ ‘ರಾಜಾಹುಲಿ’

22/07/2021, 12:46

ಬೆಂಗಳೂರು (ReporterKarnataka.com)

ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್​ ಯಡಿಯೂರಪ್ಪ ಬದಲಾವಣೆ ಎನ್ನುವ ವಿಷಯ ಹೊರ ಬಿದ್ದ ಮೇಲೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವೆ ಸೃಷ್ಟಿಯಾಗಿದೆ. ಯಡಿಯೂರಪ್ಪ ಬದಲಾಗಬಾರದು ಅಂತ ಮಠಾಧೀಶರಿಂದ ಹಿಡಿದು, ಜನ ಸಾಮಾನ್ಯರವರೆಗೂ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಆದರೆ ಸ್ವತಃ ಸಿಎಂ ಯಡಿಯೂರಪ್ಪ ಪರೋಕ್ಷವಾಗಿ ಜುಲೈ 26 ರಂದು ರಾಜೀನಾಮೆ ನೀಸುವುದರ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಹೌದು, ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಬಿಎಸ್​ವೈ, ಜುಲೈ 25ರಂದು ವರಿಷ್ಠರ ಸೂಚನೆ ಬರುತ್ತೆ, ಜುಲೈ 26ರಿಂದ ಹೈಕಮಾಂಡ್​ ಸೂಚನೆಯಂತೆ ನಡೆಯುವೆ, ಹೈಕಮಾಂಡ್​ ನಿರ್ಧಾರಕ್ಕೆ ನಾನು ಬದ್ಧನಾಗಿರುವೆ, ಹೈಕಮಾಂಡ್​ ತೀರ್ಮಾನವೇ ನನ್ನ ತೀರ್ಮಾನ, ನಮ್ಮ ಪಕ್ಷದಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅವಕಾಶ ಕೊಟ್ಟಿಲ್ಲ, ಆದರೂ ನನಗೆ ವರಿಷ್ಠರು ಅವಕಾಶ ನೀಡಿದ್ದರು. ಅವರು ಕೊಟ್ಟ ಅವಕಾಶವನ್ನು ಸಮರ್ಥವಾಗಿ ಬಳಸಿದ್ದೇನೆ, ಪಕ್ಷ ಮತ್ತು ನಾಡಿನ ಜನರ ಹಿತಕ್ಕಾಗಿ ದುಡಿದಿದ್ದೇನೆ, ನನ್ನ ಪರ ಯಾರೂ ಪ್ರತಿಭಟನೆ, ಹೋರಾಟ ಮಾಡ್ಬೇಡಿ ಎಂದು ರಾಜೀನಾಮೆ ಬಗ್ಗೆ ರಾಜ್ಯದ ಜನರಿಗೆ ಸೂಚನೆಯನ್ನೂ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು