5:19 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

BSY Resignation | ಬಿಎಸ್‌ವೈ ರಾಜೀನಾಮೆ ಬಹುತೇಕ ಫಿಕ್ಸ್ : ಪರೋಕ್ಷವಾಗಿ ಸುಳಿವು ಬಿಟ್ಟುಕೊಟ್ಟ ‘ರಾಜಾಹುಲಿ’

22/07/2021, 12:46

ಬೆಂಗಳೂರು (ReporterKarnataka.com)

ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್​ ಯಡಿಯೂರಪ್ಪ ಬದಲಾವಣೆ ಎನ್ನುವ ವಿಷಯ ಹೊರ ಬಿದ್ದ ಮೇಲೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವೆ ಸೃಷ್ಟಿಯಾಗಿದೆ. ಯಡಿಯೂರಪ್ಪ ಬದಲಾಗಬಾರದು ಅಂತ ಮಠಾಧೀಶರಿಂದ ಹಿಡಿದು, ಜನ ಸಾಮಾನ್ಯರವರೆಗೂ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಆದರೆ ಸ್ವತಃ ಸಿಎಂ ಯಡಿಯೂರಪ್ಪ ಪರೋಕ್ಷವಾಗಿ ಜುಲೈ 26 ರಂದು ರಾಜೀನಾಮೆ ನೀಸುವುದರ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಹೌದು, ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಬಿಎಸ್​ವೈ, ಜುಲೈ 25ರಂದು ವರಿಷ್ಠರ ಸೂಚನೆ ಬರುತ್ತೆ, ಜುಲೈ 26ರಿಂದ ಹೈಕಮಾಂಡ್​ ಸೂಚನೆಯಂತೆ ನಡೆಯುವೆ, ಹೈಕಮಾಂಡ್​ ನಿರ್ಧಾರಕ್ಕೆ ನಾನು ಬದ್ಧನಾಗಿರುವೆ, ಹೈಕಮಾಂಡ್​ ತೀರ್ಮಾನವೇ ನನ್ನ ತೀರ್ಮಾನ, ನಮ್ಮ ಪಕ್ಷದಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅವಕಾಶ ಕೊಟ್ಟಿಲ್ಲ, ಆದರೂ ನನಗೆ ವರಿಷ್ಠರು ಅವಕಾಶ ನೀಡಿದ್ದರು. ಅವರು ಕೊಟ್ಟ ಅವಕಾಶವನ್ನು ಸಮರ್ಥವಾಗಿ ಬಳಸಿದ್ದೇನೆ, ಪಕ್ಷ ಮತ್ತು ನಾಡಿನ ಜನರ ಹಿತಕ್ಕಾಗಿ ದುಡಿದಿದ್ದೇನೆ, ನನ್ನ ಪರ ಯಾರೂ ಪ್ರತಿಭಟನೆ, ಹೋರಾಟ ಮಾಡ್ಬೇಡಿ ಎಂದು ರಾಜೀನಾಮೆ ಬಗ್ಗೆ ರಾಜ್ಯದ ಜನರಿಗೆ ಸೂಚನೆಯನ್ನೂ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು