3:50 AM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬುದ್ಧ ಪೂರ್ಣಿಮೆ: ದಕ್ಷಿಣ ಕಾಶಿ ನಂಜನಗೂಡು ದೇಗುಲಕ್ಕೆ ಹರಿದು ಬಂದ ಭಕ್ತ ಸಾಗರ; ಕಪಿಲಾ ನದಿಯಲ್ಲಿ ಪುಣ್ಯಸ್ನಾನ

23/05/2024, 19:57

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಂ

ಬುದ್ಧ ಪೂರ್ಣಿಮೆ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ.


ಇಂದು ಗುರುವಾರ ಬೆಳಗಿನ ಜಾವ 5 ಗಂಟೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಪಿಲಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಸರತಿ ಸಾಲಿನಲ್ಲಿ ದೇವಾಲಯ ಪ್ರವೇಶಿಸಿದರು. ಹರಕೆ ಹೊತ್ತ ಭಕ್ತಾಧಿಗಳು ಉರುಳು ಸೇವೆ, ಮುಡಿ ಸೇವೆ ಹಾಗೂ ತುಲಾಭಾರ ಸೇವೆಗಳನ್ನು ಸಮರ್ಪಿಸುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.
ಇನ್ನು ಬುದ್ಧ ಹುಣ್ಣಿಮೆ ಅಂಗವಾಗಿ ಶ್ರೀಕಂಠೇಶ್ವರಸ್ವಾಮಿಗೆ ವಿಶೇಷ ಧಾರ್ಮಿಕ ಪೂಜೆ ನೆರವೇರಿಸಲಾಯಿತು. ಬೆಳಿಗ್ಗೆ 8ರ ನಂತರ ದೇವಾಲಯಕ್ಕೆ ಆಗಮಿಸುವ ಜನರ ಸಂಖ್ಯೆ ಹೆಚ್ಚಾಗಿತ್ತು , ಹೀಗಾಗಿ ನೂರು ರೂಪಾಯಿ ವಿಶೇಷ ಟಿಕೇಟ್ ಮೂಲಕ ದೇವಾಲಯದ ಪ್ರವೇಶ ಪಡೆದುಕೊಳ್ಳುವವರು ಸುಮಾರು ಎರಡು ಗಂಟೆ ಸರತಿ ಸಾಲಿನಲ್ಲಿ ನಿಂತು ದೇವಾಲಯ ಪ್ರವೇಶ ಪಡೆದುಕೊಳ್ಳಬೇಕಾಯಿತು.
ನೂರಾರು ಸಂಖ್ಯೆಯಲ್ಲಿ ಧರ್ಮದರ್ಶನ ಸಾಲಿನಲ್ಲಿ ನಿಂತಿದ್ದರಿಂದ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಒಳಪ್ರವೇಶಿಸಿದರು. ದಾಸೋಹ ಭವನದಲ್ಲಿ ಅನ್ನ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿತ್ತು. ನಗರದ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ಕಂಡುಬಂದಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು