3:04 AM Tuesday17 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ…

ಇತ್ತೀಚಿನ ಸುದ್ದಿ

Budget Session | ಸ್ಮಾರ್ಟ್ ಸಿಟಿ ಯೋಜನೆ ಅವ್ಯವಹಾರಗಳ ಬಗ್ಗೆ ಅಗತ್ಯ ಕ್ರಮ: ವಿಧಾನ ಪರಿಷತ್ ನಲ್ಲಿ ಸಚಿವ ಬಿ.ಎಸ್. ಸುರೇಶ್ ಭರವಸೆ

04/03/2025, 21:19

ಬೆಂಗಳೂರು(reporterkarnataka.com):ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವ್ಯವಹಾರಗಳ ಕುರಿತು ಯಾವುದೇ ದೂರುಗಳು ದಾಖಲಾಗಿರುವುದಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ಹೇಳಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಂ. ನಾಗರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವ್ಯವಹಾರಗಳು ನಡೆದಿರುವ ಬಗ್ಗೆ ಇಲ್ಲಿಯ ವರೆಗೂ ಯಾವುದೇ ದೂರುಗಳು ದಾಖಲಾಗಿರುವುದಿಲ್ಲ. ದೂರುಗಳನ್ನು ಬಂದಲ್ಲಿ ಪರಿಶೀಲಿಸಿ ವರದಿಯನ್ನು ನೀಡಲು ಈಗಾಗಲೇ ಸಮಿತಿಯನ್ನು ಸಹ ರಚಿಸಲಾಗಿದೆ. ಸ್ಮಾರ್ಟ್ ಸಿಟಿ ಅಭಿಯಾನದಡಿ ರಾಜ್ಯದ 7 ನಗರಗಳಾದ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ – ಧಾರವಾಡ, ಮಂಗಳೂರು, ಶಿವಮೊಗ್ಗ, ತುಮಕೂರು ಮತ್ತು ಬೆಂಗಳೂರು ನಗರಗಳು ಆಯ್ಕೆಯಾಗಿರುತ್ತದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಇಲ್ಲಿಯವರೆಗೂ ಬಿಡುಗಡೆಯಾದ ರೂ. 6854.5 ಕೋಟಿ ಅನುದಾನದಲ್ಲಿ ರೂ. 6472.08 ಕೋಟಿಗಳನ್ನು ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು