6:22 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಜೆಟ್ ಮಂಡನೆ ವೇಳೆ ಸಭಾತ್ಯಾಗ ಮಾಡಿದ ಬಿಜೆಪಿ, ಜೆಡಿಎಸ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

16/02/2024, 21:31

ಬೆಂಗಳೂರು(reporterkarnataka.com): ಬಜೆಟ್ ವೇಳೆ ಸಭಾತ್ಯಾಗ ಮಾಡಿದ ವಿರೋಧ ಪಕ್ಷಗಳ ವಿರುದ್ಧ ಕಿಡಿ ಕಾಡಿರುವ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸದನದ ಗೌರವಕ್ಕೆ ದಕ್ಕೆ ತಂದಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ಎಲ್ಲಾ ಕ್ಷೇತ್ರಗಳಿಗೆ ಸಮಾನಾಗಿ ಅನುದಾನ ಹಂಚಿಕೆ ಮಾಡಿದ್ದಾರೆ. ಅವರದ್ದೆ (ಬಿಜೆಪಿ) ಸರ್ಕಾರ ಕೇಂದ್ರದಲ್ಲಿದ್ದು, ಜಿಎಸ್ ಟಿ ಸೇರಿದಂತೆ ಇನ್ನಿತರ ಯಾವುದೇ ಅನುದಾನ ಬಿಡುಗಡೆ ಮಾಡಲು ಒತ್ತಡ ಹೇರಿಲ್ಲ. ಬದಲಿಗೆ ರಾಜಕೀಯ ಮಾಡಿಕೊಂಡೇ ಬಂದಿದ್ದಾರೆ ಎಂದು ಸಚಿವರು ಆರೋಪಿಸಿದರು.
ರಾಜ್ಯದಲ್ಲಿ ಎದುರಾಗಿರುವ ಬರಗಾಲದ ನಡುವೆಯೂ ಸಿಎಂ ಸಿದ್ದರಾಮಯ್ಯ 3 ಲಕ್ಷದ 71 ಸಾವಿರದ 383 ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಜನಪ್ರಿಯ ಬಜೆಟ್ ಗೆ ಬಿಜೆಪಿ ಅವಮಾನ ಮಾಡಿದೆ. ಮುಂದಿನ ದಿನಗಳಲ್ಲಿ ಜನರೇ ಇದಕ್ಕೆ ಉತ್ತರ ನೀಡುವರು. ಯಾವುದೇ ಒಂದು ಸಮುದಾಯವನ್ನು ಒಲೈಸುವ ಬಜೆಟ್ ಇದಾಗಿಲ್ಲ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು