5:05 PM Sunday12 - April 2026
ಬ್ರೇಕಿಂಗ್ ನ್ಯೂಸ್
ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ…

ಇತ್ತೀಚಿನ ಸುದ್ದಿ

ಬಂಟರ ಸಂಘದ ಗಣೇಶೋತ್ಸವ ಸಮಾಜಕ್ಕೆ ಮಾದರಿ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

28/08/2025, 22:39

*ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ ಎರಡನೇ ದಿನದ ಧಾರ್ಮಿಕ ಸಭೆ*

ಮಂಗಳೂರು(reporterkarnataka.com): ಬಂಟ್ಸ್ ಹಾಸ್ಟೆಲ್ ಸಾರ್ವಜನಿಕ ಗಣೇಶೋತ್ಸವ ಎರಡನೇ ದಿನದ ಧಾರ್ಮಿಕ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಬಳಿಕ ಮಾತಾಡಿದ ಅವರು, “ನಾನು ಮೊದಲ ಬಾರಿ ಇಲ್ಲಿಗೆ ಆಗಮಿಸಿದ್ದೇನೆ. ಬಹಳ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸುತ್ತಿದ್ದೀರಿ. ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಇಡೀ ಲೋಕಕ್ಕೆ ಒಳೆಯದಾಗಲಿ. ಬಂಟರ ಸಂಘ ನಡೆಸುತ್ತಿರುವ ಈ ಕಾರ್ಯಕ್ರಮ ಲೋಕಕ್ಕೆ ಮಾದರಿಯಾದುದು. ನಮ್ಮೆಲ್ಲರ ಮೇಲೆ ಗಣೇಶನ ಕೃಪೆ ಸದಾ ಇರಲಿ” ಎಂದರು.
ನಿವೃತ್ತ ಐಎಎಸ್ ಅಧಿಕಾರಿ ಟಿ.ಶ್ಯಾಮ ಭಟ್ ಮಾತಾಡಿ, “ಈ ಜಗತ್ತು ಸರ್ವೋಚ್ಛ ಶಕ್ತಿಯಿಂದ ಮುನ್ನಡೆಯಲ್ಪಡುತ್ತಿದೆ. ಬಾಲ ಗಂಗಾಧರ್ ತಿಲಕ್ ಸ್ಥಾಪಿಸಿರುವ ಗಣೇಶೋತ್ಸವ ನಿಜ ಅರ್ಥದಲ್ಲಿ ಇಡೀ ಸಮಾಜದ ಉತ್ಸವವಾಗಿದೆ. ಇದರಲ್ಲಿ ಎಲ್ಲ ಜಾತಿ ಧರ್ಮದ ಜನರು ಪಾಲ್ಗೊಳ್ಳುತ್ತಿರುವುವುದು ಸಂತಸದ ವಿಚಾರ. ಜಿಲ್ಲೆಯ ಅಭಿವೃದ್ಧಿಯ ವಿವಿಧ ಸ್ತರಗಳಲ್ಲಿ ಬಂಟ ಸಮಾಜದ ಪಾತ್ರ ಪ್ರಧಾನವಾದುದು. ಗಣೇಶೋತ್ಸವ ಇನ್ನು ಮುಂದೆಯೂ ಇನ್ನಷ್ಟು ಸಂಭ್ರಮದಲ್ಲಿ ನಡೆಯಲಿ” ಎಂದರು.
ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಮಾತಾಡಿ, ““ಕಳೆದ 19 ವರ್ಷಗಳಿಂದ ನಡೆಯುತ್ತಿರುವ ಈ ಧಾರ್ಮಿಕ ಕಾರ್ಯಕ್ರಮ ಶ್ರೇಷ್ಠವಾದುದು. ಗಣಪನಿಗೆ ತೆಂಗಿನಕಾಯಿ ಅಂದರೆ ಇಷ್ಟ, ನಾರಿಕೇಳ ಯಾಗ ಗಣಪತಿಗೆ ಪ್ರಧಾನವಾದುದು. ಇದು ನಮ್ಮ ಧರ್ಮ, ಸಂಸ್ಕಾರವನ್ನು ಮುಂದಿನ ಪೀಳಿಗೆಗೂ ಪರಿಚಯ ಮಾಡುವ ಕಾರ್ಯವಾಗಿದೆ. ಬಂಟರ ಸಂಘಟನೆ ನಮ್ಮ ತುಳುನಾಡಿನ ಸಂಸ್ಕೃತಿ, ಪರಂಪರೆ, ಧಾರ್ಮಿಕ ನಂಬಿಕೆಯನ್ನು ಮಕ್ಕಳಿಗೆ ತಿಳಿಸುವ ಕೆಲಸ ಮಾಡುತ್ತಿದೆ. ಇದು ನಿಜಕ್ಕೂ ಒಳ್ಳೆಯ ಕೆಲಸ. ಈ ಬಾರಿ ದುಬೈಯಲ್ಲೂ ಗಣೇಶೋತ್ಸವ ಆಚರಣೆ ಮಾಡುತ್ತಿದ್ದೇವೆ. ಅಲ್ಲಿನ ಆಡಳಿತ ಅನುಮತಿ ನೀಡಿರುವುದು ನಮ್ಮ ಭಾರತೀಯ ಸಂಸ್ಕೃತಿಗೆ ಸಿಕ್ಕ ಜಯ“ ಎಂದರು.
ವೇದಿಕೆಯಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಕಣಚೂರು ಮೆಡಿಕಲ್ ಕಾಲೇಜಿನ ಹಾಜಿ ಯು.ಕೆ.ಮೋನು, ವಾಲ್ಟರ್ ನಂದಳಿಕೆ, ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ ಅವರನ್ನು ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆಗಾಗಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಸಿಎ ಶ್ರೀನಿವಾಸ್ ಕಾಮತ್, ಬ್ಯಾಂಕ್ ಆಫ್ ಬರೋಡದ ಮಹಾ ಪ್ರಬಂಧಕ ರಾಜೇಶ್ ಖನ್ನಾ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಸಂತೋಷ್ ಶೆಟ್ಟಿ ಮೂಡುಶೆಡ್ಡೆ, ಕಮಲಾಕ್ಷ ಶೆಟ್ಟಿ, ಕೃಷ್ಣಮೂರ್ತಿ ರೈ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮತ್ತಿತರರು ಉಪಸ್ಥಿತರಿದ್ದರು.
ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕೃಷ್ಣಪ್ರಸಾದ್ ರೈ ಬೆಳ್ಳಿಪ್ಪಾಡಿ ಧನ್ಯವಾದ ಸಮರ್ಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು