2:33 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಬಸ್ ಚಾಲಕ -ನಿರ್ವಾಹಕ, ದ್ವಿಚಕ್ರ ವಾಹನ ಸವಾರರಿಗೆ ಜೀವ ಉಳಿಸೋ ಪಾಠ: ಕದ್ರಿ ಠಾಣೆ ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಭಟ್ ರಿಂದ ಮತ್ತೆ ಹಿತವಚನ

07/11/2023, 16:40

ಮಂಗಳೂರು(reporterkarnataka.com): ನಗರದ ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ ಕೃಷ್ಣ ಭಟ್ ಅವರು ಮತ್ತೆ ಬಸ್ ಚಾಲಕ ನಿರ್ವಾಹಕ, ದ್ವಿಚಕ್ರ ವಾಹನ ಸವಾರರಿಗೆ ಜೀವ ಉಳಿಸೋ ಪಾಠ ಹೇಳಿದ್ದಾರೆ. ಜೀವ ರಕ್ಷಣೆ ನಮ್ಮ ಕೈಯಲ್ಲೇ ಇದೆ ಎಂಬ ಸಂದೇಶ ಸಾರಿದ್ದಾರೆ.


ನಗರ ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಬಸ್ ಚಾಲಕ,ನಿರ್ವಾಹಕರಿಗೆ ಪ್ರಯಾಣಿರು ಎಲ್ಲೆಂದರಲ್ಲಿ ಬಸ್ ನಿಲ್ಲಿಸಬಾರದು, ಬಸ್ ಸ್ಟಾಪ್ ನಲ್ಲೆ ನಿಲ್ಲಿಸಬೇಕು ಎಂಬ ಕಿವಿಮಾತನ್ನು ಸಬ್ ಇನ್ಸ್ ಪೆಕ್ಟರ್ ನೀಡಿದ್ದಾರೆ.
ಬಸ್ ಹತ್ತುವಾಗ, ಇಳಿಯುವಾಗ ಪ್ರಯಾಣಿಕರು ಸುರಕ್ಷತೆ ಬಗ್ಗೆ ಗಮನ ಹರಿಸಬೇಕು. ನಿಮ್ಮ ಮನೆಯ ಸದಸ್ಯರಂತೆ ಭಾವಿಸಿ ಎಂದು ಚಾಲಕ ಹಾಗೂ ನಿರ್ವಾಹಕರಿಗೆ ಕಿವಿ ಮಾತು ಹೇಳಿದ್ದಾರೆ.
ದ್ವಿಚಕ್ರ ವಾಹನ ಸವಾರರಿಗೆ ಸುರಕ್ಷಿತ ಹೆಲ್ಮೆಟ್ ಧರಿಸುವತೆ, ಆದಷ್ಟು ಶೂ ಧರಿಸುವಂತೆ, ಜಾರುವ ಚಪ್ಪಲಿ ಚಲಾವಣೆಯ ವೇಳೆ ಕಡಿಮೆ ಮಾಡಿ ನಿಮ್ಮ ಸುರಕ್ಷತೆ ಕಾಪಾಡಿ, ಪಾದಾಚಾರಿಗಳ ಮೇಲು ಗಮನವಿರಲಿ, ವೇಗವಾಗಿ ಚಲಿಸದೆ,ಗಮನ ಚಾಲನೆಯ ಮೇಲಿರಲಿ. ದಿನ ಚಲಾವಣೆಯನ್ನು ಆನಂದಿಸುವ ಮನಸ್ಸು ಬೆಳೆಸಿಕೊಳ್ಳಿ,
ಮನೆಯಲ್ಲಿ ನಿಮಗಾಗಿ ಕಾಯುವ ಪ್ರೀತಿಯ ಜೀವವನ್ನು ನೆನೆಸಿಪಿಸಿಕೊಳ್ಳಿ ಎಂದು ಜೀವನ ಮೌಲ್ಯವನ್ನು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು