7:34 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಬಸ್ ಚಾಲಕ -ನಿರ್ವಾಹಕ, ದ್ವಿಚಕ್ರ ವಾಹನ ಸವಾರರಿಗೆ ಜೀವ ಉಳಿಸೋ ಪಾಠ: ಕದ್ರಿ ಠಾಣೆ ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಭಟ್ ರಿಂದ ಮತ್ತೆ ಹಿತವಚನ

07/11/2023, 16:40

ಮಂಗಳೂರು(reporterkarnataka.com): ನಗರದ ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ ಕೃಷ್ಣ ಭಟ್ ಅವರು ಮತ್ತೆ ಬಸ್ ಚಾಲಕ ನಿರ್ವಾಹಕ, ದ್ವಿಚಕ್ರ ವಾಹನ ಸವಾರರಿಗೆ ಜೀವ ಉಳಿಸೋ ಪಾಠ ಹೇಳಿದ್ದಾರೆ. ಜೀವ ರಕ್ಷಣೆ ನಮ್ಮ ಕೈಯಲ್ಲೇ ಇದೆ ಎಂಬ ಸಂದೇಶ ಸಾರಿದ್ದಾರೆ.


ನಗರ ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಬಸ್ ಚಾಲಕ,ನಿರ್ವಾಹಕರಿಗೆ ಪ್ರಯಾಣಿರು ಎಲ್ಲೆಂದರಲ್ಲಿ ಬಸ್ ನಿಲ್ಲಿಸಬಾರದು, ಬಸ್ ಸ್ಟಾಪ್ ನಲ್ಲೆ ನಿಲ್ಲಿಸಬೇಕು ಎಂಬ ಕಿವಿಮಾತನ್ನು ಸಬ್ ಇನ್ಸ್ ಪೆಕ್ಟರ್ ನೀಡಿದ್ದಾರೆ.
ಬಸ್ ಹತ್ತುವಾಗ, ಇಳಿಯುವಾಗ ಪ್ರಯಾಣಿಕರು ಸುರಕ್ಷತೆ ಬಗ್ಗೆ ಗಮನ ಹರಿಸಬೇಕು. ನಿಮ್ಮ ಮನೆಯ ಸದಸ್ಯರಂತೆ ಭಾವಿಸಿ ಎಂದು ಚಾಲಕ ಹಾಗೂ ನಿರ್ವಾಹಕರಿಗೆ ಕಿವಿ ಮಾತು ಹೇಳಿದ್ದಾರೆ.
ದ್ವಿಚಕ್ರ ವಾಹನ ಸವಾರರಿಗೆ ಸುರಕ್ಷಿತ ಹೆಲ್ಮೆಟ್ ಧರಿಸುವತೆ, ಆದಷ್ಟು ಶೂ ಧರಿಸುವಂತೆ, ಜಾರುವ ಚಪ್ಪಲಿ ಚಲಾವಣೆಯ ವೇಳೆ ಕಡಿಮೆ ಮಾಡಿ ನಿಮ್ಮ ಸುರಕ್ಷತೆ ಕಾಪಾಡಿ, ಪಾದಾಚಾರಿಗಳ ಮೇಲು ಗಮನವಿರಲಿ, ವೇಗವಾಗಿ ಚಲಿಸದೆ,ಗಮನ ಚಾಲನೆಯ ಮೇಲಿರಲಿ. ದಿನ ಚಲಾವಣೆಯನ್ನು ಆನಂದಿಸುವ ಮನಸ್ಸು ಬೆಳೆಸಿಕೊಳ್ಳಿ,
ಮನೆಯಲ್ಲಿ ನಿಮಗಾಗಿ ಕಾಯುವ ಪ್ರೀತಿಯ ಜೀವವನ್ನು ನೆನೆಸಿಪಿಸಿಕೊಳ್ಳಿ ಎಂದು ಜೀವನ ಮೌಲ್ಯವನ್ನು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು