5:57 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದಿದ್ದ ಮರ ತಪ್ಪಿಸಲು ಹೋಗಿ ಚರಂಡಿಗಿಳಿದ ಬಸ್: ಅದೃಷ್ಟವಶಾತ್ 40 ಮಂದಿ ಪ್ರವಾಸಿಗರು ಅಪಾಯದಿಂದ ಪಾರು

29/04/2025, 21:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಇಂದು ಸಂಜೆ ಭಾರೀ ಗಾಳಿ ಮಳೆಯಾಗಿದ್ದು, ಬಾಳೆಹೊನ್ನೂರು-ಕಳಸ ಮಾರ್ಗ ಮಧ್ಯದಲ್ಲಿರುವ ನೂರಪಾಲ್ ಎಂಬಲ್ಲಿ ಬಸ್ಸೊಂದು ರಸ್ತೆಯಲ್ಲಿ ಬಿದ್ದ ಮರ ತಪ್ಪಿಸಲು ಹೋಗಿ ಚರಂಡಿಗಿಳಿದ ಘಟನೆ ನಡೆದಿದೆ.
ಭಾರೀ ಗಾಳಿ-ಮಳೆಗೆ ಮರವೊಂದು ರಸ್ತೆ ಮೇಲೆ ಮುರಿದು ಬಿದ್ದಿತ್ತು. ಬಸ್ ಚಾಲಕ ಮರ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದಿದೆ. ಚರಂಡಿಗೆ ಇಳಿದ ಬಸ್ ಚಾಲಕನ ಚಾಕಚಕ್ಯತೆಯಿಂದ ಪಲ್ಟಿಯಾಗೋದು ತಪ್ಪಿದೆ. ಅದೃಷ್ಟವಶಾತ್ 40 ಮಂದಿ ಪ್ರಯಾಣಿಕರಿದ್ದ ಪ್ರವಾಸಿ ಬಸ್ ಜಸ್ಟ್ ಮಿಸ್ ಆಗಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.


ಒಂದೆಡೆ ಮರ, ಮತ್ತೊಂದೆಡೆ ಬಸ್ ನಿಂತಿರುವ ಪರಿಣಾಮ
ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ಸುಮಾರು 2 ಕಿ.ಮೀ. ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಬಂದಿದ್ದ ಪ್ರವಾಸಿ ಬಸ್ ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು