11:00 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದಿದ್ದ ಮರ ತಪ್ಪಿಸಲು ಹೋಗಿ ಚರಂಡಿಗಿಳಿದ ಬಸ್: ಅದೃಷ್ಟವಶಾತ್ 40 ಮಂದಿ ಪ್ರವಾಸಿಗರು ಅಪಾಯದಿಂದ ಪಾರು

29/04/2025, 21:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಇಂದು ಸಂಜೆ ಭಾರೀ ಗಾಳಿ ಮಳೆಯಾಗಿದ್ದು, ಬಾಳೆಹೊನ್ನೂರು-ಕಳಸ ಮಾರ್ಗ ಮಧ್ಯದಲ್ಲಿರುವ ನೂರಪಾಲ್ ಎಂಬಲ್ಲಿ ಬಸ್ಸೊಂದು ರಸ್ತೆಯಲ್ಲಿ ಬಿದ್ದ ಮರ ತಪ್ಪಿಸಲು ಹೋಗಿ ಚರಂಡಿಗಿಳಿದ ಘಟನೆ ನಡೆದಿದೆ.
ಭಾರೀ ಗಾಳಿ-ಮಳೆಗೆ ಮರವೊಂದು ರಸ್ತೆ ಮೇಲೆ ಮುರಿದು ಬಿದ್ದಿತ್ತು. ಬಸ್ ಚಾಲಕ ಮರ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದಿದೆ. ಚರಂಡಿಗೆ ಇಳಿದ ಬಸ್ ಚಾಲಕನ ಚಾಕಚಕ್ಯತೆಯಿಂದ ಪಲ್ಟಿಯಾಗೋದು ತಪ್ಪಿದೆ. ಅದೃಷ್ಟವಶಾತ್ 40 ಮಂದಿ ಪ್ರಯಾಣಿಕರಿದ್ದ ಪ್ರವಾಸಿ ಬಸ್ ಜಸ್ಟ್ ಮಿಸ್ ಆಗಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.


ಒಂದೆಡೆ ಮರ, ಮತ್ತೊಂದೆಡೆ ಬಸ್ ನಿಂತಿರುವ ಪರಿಣಾಮ
ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ಸುಮಾರು 2 ಕಿ.ಮೀ. ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಬಂದಿದ್ದ ಪ್ರವಾಸಿ ಬಸ್ ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು