8:35 AM Monday23 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಬಸ್ ನಲ್ಲಿ ದೊರಕಿದ್ದ ದುಬಾರಿ ಮೊಬೈಲ್‌: ಮಾಲೀಕರಿಗೆ ತಲುಪಿಸಿದ ಸಂಡೂರು ಮೂಲದ ದಂಪತಿ

01/01/2023, 11:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಸಾರಿಗೆ ಬಸ್ ನಲ್ಲಿ ಮರೆತು ಬಿಟ್ಟು ಹೋದ ದುಬಾರಿ ಬೆಲೆಯ ಮೊಬೈಲ್‌ ನ್ನು. ಸಾರಿಗೆ ಸಿಬ್ಬಂದಿ ಮೊಬೈಲ್‌ ಮಾಲೀಕರಿಗೆ ಸುರಕ್ಷಿತವಾಗಿ ತಲುಪಿಸುವ ಮೂಲಕ, ಸಾರಿಗೆ ಸಿಬ್ಬಂದಿ ಪ್ರಾಮಾಣಿಕತೆ ಮೆರೆದ ಪ್ರಸಂಗ ಜರುಗಿದೆ.

ಕಲ್ಯಾಣ ಕರ್ನಾಟಕ ಸಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕೂಡ್ಲಿಗಿ ಪಟ್ಟಣದ ಎಸ್ಡಿ ಎಮ್ಸಿ ತಾಲೂಕು ಘಟಕ ಅಧ್ಯಕ್ಷೆ ಹಾಗೂ ಪತ್ರಕರ್ತೆ ಡಿ.ಭಾಗ್ಯಮ್ಮ ಸೋಮುರವರು ಘಟನೆಗೆ ಸಾಕ್ಷಿಯಾಗಿದ್ದಾರೆ. ಅವರು ಕಳೆದೆರೆಡು ದಿನಗಳ ಹಿಂದೆಯಷ್ಟೇ ದಾವಣಗೆರೆಗೆ ತೆರಳಿ, ಮರುದಿನ ದಾವಣಗೆರೆ ಯಿಂದ ಕೂಡ್ಲಿಗಿ ಗೆ ಸಾರಿಗೆ ಬಸ್ ನಲ್ಲಿ ಹಿಂದಿರುಗಿ ಬಂದಿದ್ದಾರೆ.

ಕೂಡ್ಲಿಗಿ ಪಟ್ಟಣದಲ್ಲಿ ಬಸ್ ನಿಂದ ಕೆಳಗಿಳಿಯುವಾಗ ತಮ್ಮ ಮೊಬೈಲ್‌ ನ್ನು, ಅವರು ತಾವು ಕುಳಿತ ಬಸ್ ನ ಸೀಟ್ ನಲ್ಲಿಯೇ ಮರೆತು ಇಳಿದೋಗಿದ್ದಾರೆ. ನಂತರ ತಡವಾಗಿಯೇ ಮೊಬೈಲ್‌ ನ್ನು ಗಮನಿಸಿದ ಹತ್ತಿರದ ಸೀಟ್ ನಲ್ಲಿದ್ದ, ಸಹ ಪ್ರಯಾಣಿಕರಾದ ಸಂಡೂರು ಮೂಲದ ಅಪರಿಚಿತ ದಂಪತಿ ಭಾಗ್ಯಮ್ಮರವರ ಮೊಬೈಲ್‌ ನ್ನು ಬಸ್ ನಿರ್ವಾಹಕ ಹಾಗೂ ಚಾಲಕರಿಗೆ ತಲುಪಿಸಿದ್ದಾರೆ, ಕೂಡ್ಲಿಗಿ ಘಟಕದ ಸಿಬ್ಬಂದಿ ಮಾಲೀಕರಾದ ತಮ್ಮನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ನಂತರ ಘಟಕ ದ ಕಚೇರಿಗೆ ತಮ್ಮ ಕರೆಸಿಕೊಂಡು ಮೊಬೈಲ್‌ನ್ನು ತಮಗೆ ತಲುಪಿಸಿರುವುದಾಗಿ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಯಾಣಿಕರಾದ ಸಂಡೂರು ಮೂಲದ ಅಪರಿಚಿತ ದಂಪತಿ ಹಾಗೂ ಸಾರಿಗೆ ಘಟಕ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು