3:59 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಬಸ್ ಸಂಚಾರ ಮಾರ್ಗ ಬದಲಾವಣೆ: ಸಾರ್ವಜನಿಕರಿಂದ ದೂರು; ಶಾಸಕ ವೇದವ್ಯಾಸ ಕಾಮತ್ ಪರಿಶೀಲನೆ

16/07/2021, 07:56

ಮಂಗಳೂರು(reporterkarnataka news): ನಗರದಲ್ಲಿ ಬಸ್ ಸಂಚಾರಿ ಮಾರ್ಗ ಬದಲಾವಣೆಯ ಕುರಿತು ಸಾರ್ವಜನಿಕವಾಗಿ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಟೇಟ್ ಬ್ಯಾಂಕ್ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ಸಿಬ್ಬಂದಿಗಳಲ್ಲಿ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ‌ಶಾಸಕ ಕಾಮತ್, ಬಸ್ ಮಾಲಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳು ನಡೆಸಿದ ಸಭೆಯಲ್ಲಿ ಪಾಲ್ಗೊಂಡು ಮಾರ್ಗ ಬದಲಾವಣೆಯ ಕುರಿತು ಒಪ್ಪಿಗೆ ಸೂಚಿಸಿದ ಬಳಿಕವೇ ಬಸ್ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ವರೆಗೆ ಬಸ್ ಮಾಲಕರ ಸಂಘದ ಪ್ರಮುಖರು ಆಗುತ್ತಿರುವ ತೊಂದರೆಯ ಕುರಿತು ನನ್ನ ಬಳಿ ಚರ್ಚಿಸಿಲ್ಲ. ಆ ಬಳಿಕ ಸಾರ್ವಜನಿಕವಾಗಿ ಸಮಸ್ಯೆಯ ಕುರಿತು ಮಾಹಿತಿ ದೊರೆತ ಕೂಡಲೆ ಬಸ್ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿದ್ದೇನೆ ಎಂದರು.

ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿ ನಡೆಸಿದ್ದೇನೆ. ಕೆಲವು ಕಡೆಗಳಲ್ಲಿ ರಸ್ತೆ ವಿಭಜಕಗಳನ್ನು ತೆರವುಗೊಳಿಸುವುದು ಸೇರಿದಂತೆ ಒಂದಷ್ಟು ಬದಲಾವಣೆ ಮಾಡಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗದಂತೆ ಸರಿಪಡಿಸಲು ತಿಳಿಸಿದ್ದೇನೆ. ಸಂಚಾರಿ ಪೋಲಿಸರೊಂದಿಗೂ ಕೂಡ‌ ಈ ವಿಚಾರದ ಕುರಿತು ಸಭೆ ನಡೆಸಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ,ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಮೇಯರ್ ಹಾಗೂ ಸ್ಥಳೀಯ ಮನಪಾ ಸದಸ್ಯರಾದ ದಿವಾಕರ್ ಪಾಂಡೇಶ್ವರ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಮುತಾಲಿಬ್, ವಸಂತ್ ಜೆ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು