3:38 AM Tuesday23 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಬಸ್ ಸ್ಟಾಂಡ್ ಪಾಲಿಟಿಕ್ಸ್!: ಕಡಲನಗರಿಯಲ್ಲಿ ಚಿಲ್ಲರೆ ರಾಜಕೀಯಕ್ಕೆ ಪ್ರಯಾಣಿಕರು ಹೈರಾಣ!!

13/09/2024, 12:39

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಅದೊಂದು ಪುಟ್ಟ ಸಿಟಿ ಬಸ್ ನಿಲ್ದಾಣ. ಅವಸರದಲ್ಲಿ ಹೊಸತಾಗಿ ನಿರ್ಮಿಸಿದ ಬಸ್ ನಿಲ್ದಾಣ. ಹಾಗೆ ಅಷ್ಟೇ ಅವಸರದಲ್ಲಿ ತೆರುವು ಕೂಡ ಮಾಡಲಾಗಿದೆ. ಇಲ್ಲಿನ ಎರಡು ರಾಜಕೀಯ ಪಕ್ಷಗಳ ಮೇಲಾಟಕ್ಕೂ ಈ ಬಸ್ ನಿಲ್ದಾಣ ಸಾಕ್ಷಿಯಾಗಿದೆ.
ಇದು ಇರುವುದು ಕಡಲನಗರಿ ಮಂಗಳೂರಿನ ಹೃದಯ ಭಾಗವಾದ ಹಂಪನಕಟ್ಟೆಯಲ್ಲಿ. ಮಂಗಳೂರಿನ ವಿವಿ ಕಾಲೇಜು ಎದುರುಭಾಗದಲ್ಲಿ. ಇದೀಗ ಈ ತೆರವುಗೊಳಿಸಿದ ಬಸ್ ಸ್ಟಾಂಡ್ ವಿಷಯ ಟ್ರೆಂಡಿಂಗ್ ನಲ್ಲಿದೆ.


ಕರಾವಳಿಯ ಅತೀ ದೊಡ್ಡ ನಗರವಾದ ಮಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸರ್ವೆ ಸಾಮಾನ್ಯವಾಗಿದೆ. ಪೀಕ್ ಅವರ್ಸ್ ನಲ್ಲಂತೂ ಇದರ ಸಮಸ್ಯೆ ಹೇಳಿ ತೀರದು. ಟ್ರಾಫಿಕ್ ಸುಧಾರಣೆ ಹೆಸರಿನಲ್ಲಿ ಅವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳುವುದು, ಟ್ರಾಫಿಕ್ ನಿಯವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸದಿರುವುದು ಸಮಸ್ಯೆ ಇನ್ನಷ್ಟು ಬಿಗಡಾಯಿಸಲು ಕಾರಣವಾಗಿದೆ. ಇದೀಗ ರಾಜಕೀಯ ಮೇಲಾಟವೂ ಸೇರಿಕೊಂಡಿದೆ. ವಿವಿ ಕಾಲೇಜು ಎದುರುಗಡೆ ಇರುವ ಬಸ್ ನಿಲ್ದಾಣದ್ದೂ ಇದೇ ಕತೆಯಾಗಿದೆ.
ವಾಸ್ತವದಲ್ಲಿ ಇಲ್ಲಿ ಬಸ್ ಸ್ಟಾಪ್ ಇರಲಿಲ್ಲ. ಈ ಜಾಗದಿಂದ ಸ್ವಲ್ಪ ಮುಂದುಗಡೆ ಆಟೋ ನಿಲ್ದಾಣದ ಬಳಿ ಬಸ್ ಸ್ಟಾಪ್ ಇತ್ತು. ಪ್ರಯಾಣಿಕರಿಗೆ ನಿಲ್ಲಲು ಬಸ್ ನಿಲ್ದಾಣವಿಲ್ಲದಿದ್ದರೂ ಬಿಸಿಲು ಮಳೆಗೆ ಪ್ರಯಾಣಿಕರು ಅಲ್ಲೇ ನಿಂತು ಬಸ್ ಹತ್ತುತ್ತಿದ್ದರು. ಆದರೆ ಇತ್ತೀಚೆಗೆ ಅಲ್ಲೇ ಸ್ವಲ್ಪ ಹಿಂದುಗಡೆ ಅಧಿಕೃತ ಬಸ್ ನಿಲ್ದಾಣವನ್ನು ಮಾಡಲಾಯಿತು. ಇಲ್ಲಿನ ಪ್ರಮುಖ ಸಮಸ್ಯೆ ಎಂದರೆ ಪಕ್ಕದಲ್ಲೇ ಎಡಬದಿಗೆ ಮಾರುಕಟ್ಟೆ, ಕಾರ್ ಸ್ಟ್ರೀಟ್, ಬಂದರು ಕಡೆಗೆ ಹೋಗುವ ರಸ್ತೆ ಇದೆ. ಸಿಟಿ ಬಸ್ ಕೂಡ ಈ ರಸ್ತೆಯಲ್ಲಿ ಸಂಚರಿಸುತ್ತದೆ. ಇದು ಬಸ್ ಸ್ಟಾಪ್ ನ ಅತೀ ಸನಿಹದಲ್ಲಿದೆ. ಇದರಿಂದ ಮತ್ತಷ್ಟು ಟ್ರಾಫಿಕ್ ಜಾಮ್ ಗೆ ದಾರಿ ಮಾಡಿಕೊಟ್ಟಾಗೆ ಆಗುತ್ತದೆ. ಇಷ್ಟೇ ಅಲ್ಲದೆ ಅಪಘಾತದ ಸಾಧ್ಯತೆಯೂ ಬಹಳಷ್ಟು ಹೆಚ್ಚಾಗಿದೆ. ಇದನ್ನೆಲ್ಲ ಅವಲೋಕಿಸುವಾಗ ಬಸ್ ಸ್ಟಾಪ್ ತೆರವುಗೊಳಿಸಿದ್ದು ಒಳ್ಳೆಯ ಕ್ರಮವಾಗಿದೆ ಎಂದು ಪ್ರಜ್ಞಾವಂತ ನಾಗರಿಕರು ಹೇಳಿಕೊಳ್ಳುತ್ತಾರೆ. ಇಲ್ಲಿನ ಬಸ್ ನಿಲ್ದಾಣದ ಬದಲಿಗೆ ಅಲ್ಲೇ ಸ್ವಲ್ಪ ಮುಂದಕ್ಜೆ ಈ ಮುಂಚೆ ಇದ್ದ ಬಸ್ ಸ್ಟಾಪನ್ನು ಅಧಿಕೃತಗೊಳಿಸಿ ಅಲ್ಲೇ ಬಸ್ ನಿಲ್ದಾಣ ನಿರ್ಮಿಸುವ ವಿಫುಲ ಅವಕಾಶವಿದೆ. ಪ್ರಜ್ಞಾವಂತರ ಹಕ್ಕೊತ್ತಾಯ ಕೂಡ ಇದೇ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು