8:24 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ವ್ಯಾಪಾರ ಶೆಡ್ ತೆರವು: ಕಾಂಗ್ರೆಸ್ ಮುಖಂಡ, ಶೃಂಗೇರಿ ಪಟ್ಟಣ ಪಂಚಾಯಿತಿ ಸದಸ್ಯ ಪೊಲೀಸರ ಸಮ್ಮುಖದಲ್ಲೇ ಆತ್ಮಹತ್ಯೆ ಯತ್ನ

15/03/2025, 12:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ರಫೀಕ್ ಅಹಮದ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಈ ಘಟನೆ ಶೃಂಗೇರಿ ತಹಶೀಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲೇ ನಡೆದಿದ್ದು, ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
*ಆತ್ಮಹತ್ಯೆಗೆ ಯತ್ನಕ್ಕೆ ಕಾರಣ ಏನು?:*
ರಫೀಕ್ ಅಹಮದ್ ತನ್ನ ವ್ಯಾಪಾರಕ್ಕಾಗಿ ಹಾಕಿಕೊಂಡಿದ್ದ ಶೆಡ್ ತೆರವು ಮಾಡುವ ವೇಳೆ ಈ ಘಟನೆ ನಡೆದಿದೆ.
ತಹಶೀಲ್ದಾರ್ ಹಾಗೂ ಪೊಲೀಸರು ಸುಳ್ಳು ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ.
ಶ್ರೀಮಂತರ ಅಪಾರ್ಟ್ಮೆಂಟ್ ನಿರ್ಮಾಣ, ಕೆರೆ ಹಾಗೂ ಸರಕಾರಿ ಭೂಮಿ ಅಕ್ರಮ ಸ್ವಾಧೀನ ಕುರಿತಂತೆ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.
ಶಾಸಕ ರಾಜೇಗೌಡರನ್ನು ಗೆಲ್ಲಿಸಲು ನಾವು ಜೀವ ತೇಯ್ದಿದ್ದೇವೆ. ಅವರೂ ಇಲ್ಲ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಆತ್ಮಹತ್ಯೆಗೆ ಯತ್ನಿಸುವ ಮೊದಲು ರಫೀಕ್ ಅಹಮದ್ ಹೇಳಿದ್ದಾಗಿ ತಿಳಿದುಬಂದಿದೆ.
*ಬಡವರಿಗೊಂದು ಕಾನೂನು, ಶ್ರೀಮಂತರಿಗೊಂದು ಕಾನೂನು?:*
ಬಡವರು ಜೀವನ ಸಾಗಿಸಲು ಶೆಡ್ ಹಾಕಿದರೆ ಅಕ್ರಮ, ಆದರೆ ಶ್ರೀಮಂತರ ಹೋಟೆಲ್, ಅಪಾರ್ಟ್ಮೆಂಟ್, ಕೆರೆ ಒತ್ತುವರಿ ಮಾಡಿದರೂ ಕ್ರಮವಿಲ್ಲ ಎಂಬ ಪ್ರಶ್ನೆ ಉದ್ಭವಿಸಿದೆ.
ಈ ವಿಷಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು