3:19 PM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ವ್ಯಾಪಾರ ಶೆಡ್ ತೆರವು: ಕಾಂಗ್ರೆಸ್ ಮುಖಂಡ, ಶೃಂಗೇರಿ ಪಟ್ಟಣ ಪಂಚಾಯಿತಿ ಸದಸ್ಯ ಪೊಲೀಸರ ಸಮ್ಮುಖದಲ್ಲೇ ಆತ್ಮಹತ್ಯೆ ಯತ್ನ

15/03/2025, 12:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ರಫೀಕ್ ಅಹಮದ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಈ ಘಟನೆ ಶೃಂಗೇರಿ ತಹಶೀಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲೇ ನಡೆದಿದ್ದು, ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
*ಆತ್ಮಹತ್ಯೆಗೆ ಯತ್ನಕ್ಕೆ ಕಾರಣ ಏನು?:*
ರಫೀಕ್ ಅಹಮದ್ ತನ್ನ ವ್ಯಾಪಾರಕ್ಕಾಗಿ ಹಾಕಿಕೊಂಡಿದ್ದ ಶೆಡ್ ತೆರವು ಮಾಡುವ ವೇಳೆ ಈ ಘಟನೆ ನಡೆದಿದೆ.
ತಹಶೀಲ್ದಾರ್ ಹಾಗೂ ಪೊಲೀಸರು ಸುಳ್ಳು ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ.
ಶ್ರೀಮಂತರ ಅಪಾರ್ಟ್ಮೆಂಟ್ ನಿರ್ಮಾಣ, ಕೆರೆ ಹಾಗೂ ಸರಕಾರಿ ಭೂಮಿ ಅಕ್ರಮ ಸ್ವಾಧೀನ ಕುರಿತಂತೆ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.
ಶಾಸಕ ರಾಜೇಗೌಡರನ್ನು ಗೆಲ್ಲಿಸಲು ನಾವು ಜೀವ ತೇಯ್ದಿದ್ದೇವೆ. ಅವರೂ ಇಲ್ಲ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಆತ್ಮಹತ್ಯೆಗೆ ಯತ್ನಿಸುವ ಮೊದಲು ರಫೀಕ್ ಅಹಮದ್ ಹೇಳಿದ್ದಾಗಿ ತಿಳಿದುಬಂದಿದೆ.
*ಬಡವರಿಗೊಂದು ಕಾನೂನು, ಶ್ರೀಮಂತರಿಗೊಂದು ಕಾನೂನು?:*
ಬಡವರು ಜೀವನ ಸಾಗಿಸಲು ಶೆಡ್ ಹಾಕಿದರೆ ಅಕ್ರಮ, ಆದರೆ ಶ್ರೀಮಂತರ ಹೋಟೆಲ್, ಅಪಾರ್ಟ್ಮೆಂಟ್, ಕೆರೆ ಒತ್ತುವರಿ ಮಾಡಿದರೂ ಕ್ರಮವಿಲ್ಲ ಎಂಬ ಪ್ರಶ್ನೆ ಉದ್ಭವಿಸಿದೆ.
ಈ ವಿಷಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು