1:06 PM Sunday12 - July 2026
ಬ್ರೇಕಿಂಗ್ ನ್ಯೂಸ್
ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ

ಇತ್ತೀಚಿನ ಸುದ್ದಿ

ವ್ಯಾಪಾರ ಶೆಡ್ ತೆರವು: ಕಾಂಗ್ರೆಸ್ ಮುಖಂಡ, ಶೃಂಗೇರಿ ಪಟ್ಟಣ ಪಂಚಾಯಿತಿ ಸದಸ್ಯ ಪೊಲೀಸರ ಸಮ್ಮುಖದಲ್ಲೇ ಆತ್ಮಹತ್ಯೆ ಯತ್ನ

15/03/2025, 12:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ರಫೀಕ್ ಅಹಮದ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಈ ಘಟನೆ ಶೃಂಗೇರಿ ತಹಶೀಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲೇ ನಡೆದಿದ್ದು, ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
*ಆತ್ಮಹತ್ಯೆಗೆ ಯತ್ನಕ್ಕೆ ಕಾರಣ ಏನು?:*
ರಫೀಕ್ ಅಹಮದ್ ತನ್ನ ವ್ಯಾಪಾರಕ್ಕಾಗಿ ಹಾಕಿಕೊಂಡಿದ್ದ ಶೆಡ್ ತೆರವು ಮಾಡುವ ವೇಳೆ ಈ ಘಟನೆ ನಡೆದಿದೆ.
ತಹಶೀಲ್ದಾರ್ ಹಾಗೂ ಪೊಲೀಸರು ಸುಳ್ಳು ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ.
ಶ್ರೀಮಂತರ ಅಪಾರ್ಟ್ಮೆಂಟ್ ನಿರ್ಮಾಣ, ಕೆರೆ ಹಾಗೂ ಸರಕಾರಿ ಭೂಮಿ ಅಕ್ರಮ ಸ್ವಾಧೀನ ಕುರಿತಂತೆ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.
ಶಾಸಕ ರಾಜೇಗೌಡರನ್ನು ಗೆಲ್ಲಿಸಲು ನಾವು ಜೀವ ತೇಯ್ದಿದ್ದೇವೆ. ಅವರೂ ಇಲ್ಲ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಆತ್ಮಹತ್ಯೆಗೆ ಯತ್ನಿಸುವ ಮೊದಲು ರಫೀಕ್ ಅಹಮದ್ ಹೇಳಿದ್ದಾಗಿ ತಿಳಿದುಬಂದಿದೆ.
*ಬಡವರಿಗೊಂದು ಕಾನೂನು, ಶ್ರೀಮಂತರಿಗೊಂದು ಕಾನೂನು?:*
ಬಡವರು ಜೀವನ ಸಾಗಿಸಲು ಶೆಡ್ ಹಾಕಿದರೆ ಅಕ್ರಮ, ಆದರೆ ಶ್ರೀಮಂತರ ಹೋಟೆಲ್, ಅಪಾರ್ಟ್ಮೆಂಟ್, ಕೆರೆ ಒತ್ತುವರಿ ಮಾಡಿದರೂ ಕ್ರಮವಿಲ್ಲ ಎಂಬ ಪ್ರಶ್ನೆ ಉದ್ಭವಿಸಿದೆ.
ಈ ವಿಷಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು