2:13 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರ

02/02/2026, 18:17

ತಿರುವನಂತಪುರಂ(reporterkarnataka.com): ಕಾನ್ಫಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣವು ಈಗ ರಾಷ್ಟ್ರಮಟ್ಟದ ವಿವಾದವಾಗಿ ಮಾರ್ಪಟ್ಟಿದೆ. ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಗ್ರಹಿಸಿ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.
ರಾಯ್ ಅವರ ಸಾವು ನಾಗರಿಕ ಸಮಾಜ ಮತ್ತು ಉದ್ಯಮ ರಂಗವನ್ನು ಬೆಚ್ಚಿಬೀಳಿಸಿದೆ. ಈ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದು, ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಈ ಸಾವನ್ನು ದೇಶದ ತೆರಿಗೆ ಆಡಳಿತದ ಮೇಲಿನ ಕಪ್ಪು ಚುಕ್ಕೆ ಎಂದು ವಿಜಯನ್ ಬಣ್ಣಿಸಿದ್ದಾರೆ. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿಯ ಸಂದರ್ಭದಲ್ಲಿ ಪಾಲಿಸಬೇಕಾದ ಕನಿಷ್ಠ ಶಿಷ್ಟಾಚಾರಗಳನ್ನು ಗಾಳಿಗೆ ತೂರಿದ್ದಾರೆ. ವರದಿಗಳ ಪ್ರಕಾರ, ಐಟಿ ಪರಿಶೀಲನೆ ನಡೆಯುತ್ತಿದ್ದಾಗಲೇ ರಾಯ್ ಅವರು ಪಕ್ಕದ ಕೋಣೆಗೆ ತೆರಳಿ ತಮ್ಮ ಪರವಾನಗಿ ಪಡೆದ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡಿದ್ದಾರೆ. ತನಿಖೆ ವೇಳೆಯೇ ಒಬ್ಬ ಉದ್ಯಮಿ ಪಿಸ್ತೂಲಿನಿಂದ ಶೂಟ್ ಮಾಡಿಕೊಳ್ಳಲು ಹೇಗೆ ಸಾಧ್ಯವಾಯಿತು? ಇದು ಭದ್ರತಾ ವ್ಯವಸ್ಥೆಯ ಗಂಭೀರ ಲೋಪವಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಸಿ.ಜೆ. ರಾಯ್ ಅವರ ಈ ಹಠಾತ್ ಸಾವು ಕೇರಳ ಮತ್ತು ಕರ್ನಾಟಕದ ಉದ್ಯಮ ವಲಯದಲ್ಲಿ ಆತಂಕ ಮೂಡಿಸಿದೆ. ಒಬ್ಬ ಯಶಸ್ವಿ ಉದ್ಯಮಿಯನ್ನು ಈ ಮಟ್ಟದ ನಿರ್ಧಾರಕ್ಕೆ ತಳ್ಳಿದ ಸಂದರ್ಭಗಳೇನು ಎಂಬುದನ್ನು ಪತ್ತೆಹಚ್ಚಲು ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆಯಾಗಬೇಕು ಎಂದು ಕೇರಳ ಸರ್ಕಾರ ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು