11:43 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಬ್ಯಾರಿ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನಾಚರಣೆ’: ‘ಬ್ಯಾರಿ ವಚನಮಾಲೆ’ ಕೃತಿ ಬಿಡುಗಡೆ

04/10/2022, 00:31

ಮಂಗಳೂರು(reporter Karnataka.com): ಎಲ್ಲ ಭಾಷೆ ಜೊತೆಗೆ ಇರುವ ಸಾಮರಸ್ಯ ನಮ್ಮದು. ಕರಾವಳಿ ತುಳು, ಬ್ಯಾರಿ, ಕೊಂಕಣಿ ಭಾಷೆಯ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಹೀಗಾಗಿ ಸಹಬಾಳ್ವೆ, ಸಹೋದರತೆ ಮುಖ್ಯ ಆಗುತ್ತದೆ ಎಂದು ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಹೇಳಿದರು. 

ಅವರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬ್ಯಾರಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಹಯೋಗದಲ್ಲಿ “ಬ್ಯಾರಿ ಭಾಷಾ ದಿನಾಚರಣೆ ಹಾಗೂ ಬ್ಯಾರಿ ವಚನಮಾಲೆ ಪುಸ್ತಕ ಬಿಡುಗಡೆ” ಸಮಾರಂಭವನ್ನು ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಶಿವರಾಮ ಕಾರಂತ ಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. 

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸ.ಪ.ಪೂ, ಕಾಲೇಜು ಬಿ,ಮೂಡ ಬಂಟ್ವಾಳ ಇಲ್ಲಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಇವರು ಬ್ಯಾರಿ ಭಾಷಾ ದಿನಾಚರಣೆಯ ಉಪನ್ಯಾಸ ನೀಡಿದ್ರು. ಮಾತೃಭಾಷೆಗೆ ದೇಶ ಅಲ್ಲ, ವಿದೇಶಗಳಲ್ಲೂ ಪ್ರಾಮುಖ್ಯತೆ ಇದೆ ಅಂದ್ರು.

ಲೇಖಕ ಹಾಗೂ ಸ್ನೇಹ ಪಬ್ಲಿಕ್ ಸ್ಕೂಲ್ ಬಜಾಲ್ ಇದರ ಶಿಕ್ಷಕ ಅಶೀರುದ್ದೀನ್ ಆಲಿಯಾ ಇವರು ಬರೆದ “ಬ್ಯಾರಿ ವಚನಮಾಲೆ” ಕೃತಿಯನ್ನು ಸಾಹಿತಿ ಹಾಗೂ ಪತ್ರಕರ್ತರಾದ ಹಂಝ ಮಲಾರ್ ಇವರು ಬಿಡುಗಡೆ ಮಾಡಿ ಕೃತಿ ಪರಿಚಯ ಮಾಡಿದ್ರು. ವೇದಿಕೆಯಲ್ಲಿ ಬ್ಯಾರಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಕ  ಡಾ. ಅಬೂಬಕ್ಕರ್ ಸಿದ್ದೀಕ್ ಉಪಸ್ಥಿತರಿದ್ದು ಸ್ವಾಗತಿಸಿದರು. ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯ ಶಂಶೀರ್ ಬುಡೋಳಿ ಕಾರ್ಯಕ್ರಮ ನಿರೂಪಿಸಿದರು. ಬ್ಯಾರಿ ಅಕಾಡೆಮಿ ಸದಸ್ಯೆ ಸುರೇಖಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು