10:20 PM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಬೈಂದೂರು: ಜಾತಿ ನಿಂದನೆ ಪ್ರಕರಣ; ಕಂಬದಕೋಣೆ ಅರ್ಚಕರ ವಿರುದ್ಧ ಪ್ರಕರಣ ದಾಖಲು

30/11/2022, 12:58

ಬೈಂದೂರು(reporterkarnataka.com): ಜಾತಿ ನಿಂದನೆ ಮಾಡಿದ ಹಾಗೂ ಪೂಜೆಯ ವಿಚಾರದಲ್ಲಿ ಅರ್ಚಕರ ವಿರುದ್ಧ ಪ್ರಕರಣವೊಂದು ಕಂಬದ ಕೋಣೆಯ ಕೊಕ್ಕೇಶ್ವರ ದೇವಾಲಯದಲ್ಲಿ ನಡೆದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.28ರಂದುಕಂಬದ ಕೋಣೆಯ ಕೊಕ್ಕೆಶ್ವರ ದೇವಾಲಯಕ್ಕೆ ಹೊದ ಸಂದರ್ಭದಲ್ಲಿ ಹಳಗೇರಿ ಶಿವರಾಮ ಎಂಬುವವರು ನ. 28 ರ ಬೆಳಗ್ಗೆ ದೇವರಿಗೆ ಪೂಜೆ ಮಾಡಿಸಲು ಹಣ್ಣುಕಾಯಿ, ಹೂವು ಹಾಗೂ ಪೂಜಾ ಸಾಮಗ್ರಿಗಳನ್ನು ತೆಗೆದುಕೊಂಡು ಮಗನೊಂದಿಗೆ ಕಂಬದ ಕೋಣೆ ಗ್ರಾಮದ ಕೊಕ್ಕೇಶ್ವರ ದೇವಸ್ಥಾನಕ್ಕೆ ಹೋಗಿದ್ದರು.

ಈ ವೇಳೆ ದೇವಸ್ಥಾನದ ಅರ್ಚಕರಾದ ಶೇಷಗಿರಿ ಕಾರಂತರು ಇದ್ದು, ಶಿವರಾಮ ಹಾಗೂ ಅವರ ಮಗನನ್ನು ತಡೆದು ನಿಲ್ಲಿಸಿದ್ದು, ಶಿವರಾಮ ಶೇಷಗಿರಿ ಕಾರಂತ ರವರಲ್ಲಿ ದೇವರಿಗೆ ಪೂಜೆ ಮಾಡಿಕೊಡುವಂತೆ ವಿನಂತಿಸಿಕೊಂಡಿದ್ದು ಅದಕ್ಕೆ ಶೇಷಗಿರಿ ಕಾರಂತರು ಒಪ್ಪದೇ ಇದ್ದು, ಶೇಷಗಿರಿ ಕಾರಂತರು ಶಿವರಾಮ ಹಾಗೂ ಅವರ ಮಗನಿಗೆ ಜಾತಿನಿಂದನೆ ಮಾಡಿ ದೇವಸ್ಥಾನಕ್ಕೆ ಪ್ರವೇಶ ಹಾಗೂ ಪೂಜೆಗೆ ನಿರಾಕರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿಲಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸರು ತನಿಖೆ ನಡೆಸುತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು