4:16 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಬೈಂದೂರು: ಕೆಲಸಕ್ಕೆ ಬಂದ ಪರಿಚಿತ ಮೇಸ್ತ್ರಿಯಿಂದ 1.20 ಲಕ್ಷ ಮೌಲ್ಯದ ಕರಿಮಣಿ ಸರ ಕಳವು

20/02/2023, 00:02

ಬೈಂದೂರು(reporter Karnataka.com): ಮನೆಗೆ ಬಂದ ಪರಿಚಿತ ವ್ಯಕ್ತಿ ಕೋಣೆಯ ಪೆಟ್ಟಿಗೆಯಲ್ಲಿ ಇಟ್ಟಿದ್ದ ಕರಿಮಣಿ ಸರವನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ಬೈಂದೂರಿನ ಕಾಲ್ತೋಡು ಗ್ರಾಮದ ಯಡೇರಿ ಗುರಮಕ್ಕಿ ಎಂಬಲ್ಲಿ ನಡೆದಿದೆ.

ಕಾಲ್ತೋಡು ಗ್ರಾಮದ ಸುರೇಂದ್ರ ಪೂಜಾರಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರು ಸುಮಾರು 3 ತಿಂಗಳ ಹಿಂದೆ ಮಹಾಂತೇಶ್ ಎಂಬಾತನನ್ನು ಮನೆಯ ಮೇಲ್ಮಾವಣಿಯ ಅಡ್ಡಗೋಡೆ ಕಟ್ಟಲು ಮತ್ತು ಗಾರೆ ಕೆಲಸ ಮಾಡಲು ಮನೆಗೆ ಕರೆಯಿಸಿಕೊಂಡಿದ್ದರು. ಮನೆ ಕೆಲಸ ಮುಗಿದ ಬಳಿಕ ಹಣ ನೀಡಿ ಕಳುಹಿಸಿದ್ದರು. ಆದರೆ ಮತ್ತೆ ಮನೆಗೆ ಬಂದ ಮಹಾಂತೇಶನು ಸುರೇಂದ್ರ ಅವರ ತಂಗಿಯ ಕೋಣೆಯ ಪೆಟ್ಟಿಗೆಯಲ್ಲಿಟ್ಟಿದ್ದ 1,20 ಲಕ್ಷ ರೂ. ಮೌಲ್ಯದ ಚಿನ್ನದ ಕರಿಮಣಿ ಸರವನ್ನು ಕಳವು ಮಾಡಿದ್ದಾನೆ ಎಂದು ಸುರೇಂದ್ರ ಪೂಜಾರಿ ದೂರಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು