12:29 AM Sunday26 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ಬೈಂದೂರು: ಕೆಲಸಕ್ಕೆ ಬಂದ ಪರಿಚಿತ ಮೇಸ್ತ್ರಿಯಿಂದ 1.20 ಲಕ್ಷ ಮೌಲ್ಯದ ಕರಿಮಣಿ ಸರ ಕಳವು

20/02/2023, 00:02

ಬೈಂದೂರು(reporter Karnataka.com): ಮನೆಗೆ ಬಂದ ಪರಿಚಿತ ವ್ಯಕ್ತಿ ಕೋಣೆಯ ಪೆಟ್ಟಿಗೆಯಲ್ಲಿ ಇಟ್ಟಿದ್ದ ಕರಿಮಣಿ ಸರವನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ಬೈಂದೂರಿನ ಕಾಲ್ತೋಡು ಗ್ರಾಮದ ಯಡೇರಿ ಗುರಮಕ್ಕಿ ಎಂಬಲ್ಲಿ ನಡೆದಿದೆ.

ಕಾಲ್ತೋಡು ಗ್ರಾಮದ ಸುರೇಂದ್ರ ಪೂಜಾರಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರು ಸುಮಾರು 3 ತಿಂಗಳ ಹಿಂದೆ ಮಹಾಂತೇಶ್ ಎಂಬಾತನನ್ನು ಮನೆಯ ಮೇಲ್ಮಾವಣಿಯ ಅಡ್ಡಗೋಡೆ ಕಟ್ಟಲು ಮತ್ತು ಗಾರೆ ಕೆಲಸ ಮಾಡಲು ಮನೆಗೆ ಕರೆಯಿಸಿಕೊಂಡಿದ್ದರು. ಮನೆ ಕೆಲಸ ಮುಗಿದ ಬಳಿಕ ಹಣ ನೀಡಿ ಕಳುಹಿಸಿದ್ದರು. ಆದರೆ ಮತ್ತೆ ಮನೆಗೆ ಬಂದ ಮಹಾಂತೇಶನು ಸುರೇಂದ್ರ ಅವರ ತಂಗಿಯ ಕೋಣೆಯ ಪೆಟ್ಟಿಗೆಯಲ್ಲಿಟ್ಟಿದ್ದ 1,20 ಲಕ್ಷ ರೂ. ಮೌಲ್ಯದ ಚಿನ್ನದ ಕರಿಮಣಿ ಸರವನ್ನು ಕಳವು ಮಾಡಿದ್ದಾನೆ ಎಂದು ಸುರೇಂದ್ರ ಪೂಜಾರಿ ದೂರಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು