3:07 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಬೈಂದೂರು ಒತ್ತಿನೆಣೆ ತಿರುವಿನಲ್ಲಿ ಕಾರು ಪಲ್ಟಿ: ಕಾರಿನಡಿ ಸಿಲುಕಿದ್ದ ಚಾಲಕ ಪ್ರಾಣ ರಕ್ಷಿಸಿದ ದಾರಿಹೋಕರು

18/07/2022, 09:26

ಬೈಂದೂರು(reporterkarnataka.com): ಇಲ್ಲಿಗೆ ಸಮೀಪದ ಒತ್ತಿನೆಣೆ ಬಳಿ ಕಾರೊಂದು ಸೋಮವಾರ ಪಲ್ಟಿಯಾಗಿ ಪಕ್ಕದ ರಸ್ತೆಗೆ ಉರುಳಿ ಬಿದ್ದಿದ್ದು, ಕಾರು ಚಾಲಕ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. 

ತಕ್ಷಣ ರಸ್ತೆ ಸಂಚರಿಸುತ್ತಿದ್ದ ಇತರೆ ವಾಹನದ ಪ್ರಯಾಣಿಕರ ಸಹಕಾರದಿಂದ ಬಾರಿ ಅನಾಹುತ ತಪ್ಪಿದಂತಾಗಿದೆ.

ಶಿರೂರಿನಿಂದ ಕುಂದಾಪುರ ಕಡೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಭಟ್ಕಳ ಕಡೆ ಸಾಗುವ ರಸ್ತೆಗೆ ಉರುಳಿ ಬಿದ್ದಿದೆ. ಇದರ ಪರಿಣಾಮ ಚಾಲಕ ಕಾರಿನಡಿ ಸಿಲುಕಿದ್ದು, ತಕ್ಷಣವೇ ಇತರ ವಾಹನ ಹಾಗೂ ಬಸ್ ನಲ್ಲಿದ್ದವರು ವಾಹನ ನಿಲ್ಲಿಸಿ ಕಾರನ್ನು ಸರಿಸಿ ಚಾಲಕನ ಪ್ರಾಣ ಉಳಿಸಿದ್ದಾರೆ. ಆತನನ್ನು ಬೈಂದೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಭಾಗದಲ್ಲಿ ನಿರಂತರ ವಾಹನ ಅಪಘಾತ ನಡೆಯುತ್ತಿದ್ದು, ಇದುವರಗೂ ಅಪಘಾತ ನಿಯಂತ್ರಣಕ್ಕೆ ಶಾಶ್ವತ ಕ್ರಮ ಕೈಗೊಳ್ಳದಿರುವುದು ಜನರ ಅಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು