11:18 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಬೈಲೂರಿನ ಮಂತ್ರಾಕ್ಷತೆ ವಿತರಣೆ ವೀಡಿಯೋ ಹಂಚಿಕೊಂಡ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ: ಎಲ್ಲೆಡೆ ಭಾರೀ ವೈರಲ್

09/01/2024, 20:12

ಕಾರ್ಕಳ(reporterkarnataka.com):ಕಾರ್ಕಳ ತಾಲೂಕಿನ ಎಲ್ಲಡೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ ನಡೆಯುತ್ತಿದ್ದು, ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ರಾಮಮಂದಿರ ಪ್ರತಿಷ್ಠಾಪನೆಯ ಮಂತ್ರಾಕ್ಷತೆ ವಿತರಣೆ ವೀಡಿಯೋ ದೇಶದ ಗಮನ ಸೆಳೆದಿದೆ.
ಲವಿನ್ ಕೋಟ್ಯಾನ್ ಈ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು ಈ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು,ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ರಂಗೊಲಿ ಬಿಡಿಸಿ ಸ್ವಾಗತ: ಬೈಲೂರಿನ ಮನೆ ಮನೆಯಲ್ಲಿ ರಂಗೋಲಿ ಹಾಕಿ, ದೀಪ ಬೆಳಗಿ ಮಂತ್ರಾಕ್ಷತೆಯನ್ನು ವಿತರಿಸಲಾಗುತ್ತಿದೆ. ಸುಮಾರು ಐವತ್ತಕ್ಕೂ ಹೆಚ್ಚು ರಂಗೋಲಿಗಳನ್ನು ಬಿಡಿಸಿದ್ದು ರಸ್ತೆಗಳಲ್ಲಿ ಭಜನೆ ಮಾಡುತ್ತಾ ಭಕ್ತರು ರಸ್ತೆಯ ಇಕ್ಕೆಲಗಳಲ್ಲಿ ಸಾಗುವ ವೀಡಿಯೋದಲ್ಲಿದೆ.
ವಿನೂತನವಾಗಿ ಮಂತ್ರಾಕ್ಷತೆ ವಿತರಣೆ ಮಾಡಬೇಕೆಂದು ಯೊಜನೆ ರೂಪಿಸಿದ್ದೆವು. ಈ ವೀಡಿಯೋ ಈ ರಾಮ ಜನ್ಮ ಭೂಮಿತೀರ್ಥ ಕ್ಷೇತ್ರತ ನ್ನಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವುದು ಖುಷಿ ತಂದಿದೆ. ಶತಮಾನಗಳ ಕನಸು ನನಸಾಗುತ್ತಿರುವುದು ಹೆಮ್ಮೆಯ ವಿಚಾರ ಎಂದು ಕಾರ್ಯಕ್ರಮ ರೂವಾರಿ ಮಹೇಶ್ ಶೆಣೈ ಬೈಲೂರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು