3:56 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಬೈಲೂರಿನ ಮಂತ್ರಾಕ್ಷತೆ ವಿತರಣೆ ವೀಡಿಯೋ ಹಂಚಿಕೊಂಡ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ: ಎಲ್ಲೆಡೆ ಭಾರೀ ವೈರಲ್

09/01/2024, 20:12

ಕಾರ್ಕಳ(reporterkarnataka.com):ಕಾರ್ಕಳ ತಾಲೂಕಿನ ಎಲ್ಲಡೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ ನಡೆಯುತ್ತಿದ್ದು, ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ರಾಮಮಂದಿರ ಪ್ರತಿಷ್ಠಾಪನೆಯ ಮಂತ್ರಾಕ್ಷತೆ ವಿತರಣೆ ವೀಡಿಯೋ ದೇಶದ ಗಮನ ಸೆಳೆದಿದೆ.
ಲವಿನ್ ಕೋಟ್ಯಾನ್ ಈ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು ಈ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು,ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ರಂಗೊಲಿ ಬಿಡಿಸಿ ಸ್ವಾಗತ: ಬೈಲೂರಿನ ಮನೆ ಮನೆಯಲ್ಲಿ ರಂಗೋಲಿ ಹಾಕಿ, ದೀಪ ಬೆಳಗಿ ಮಂತ್ರಾಕ್ಷತೆಯನ್ನು ವಿತರಿಸಲಾಗುತ್ತಿದೆ. ಸುಮಾರು ಐವತ್ತಕ್ಕೂ ಹೆಚ್ಚು ರಂಗೋಲಿಗಳನ್ನು ಬಿಡಿಸಿದ್ದು ರಸ್ತೆಗಳಲ್ಲಿ ಭಜನೆ ಮಾಡುತ್ತಾ ಭಕ್ತರು ರಸ್ತೆಯ ಇಕ್ಕೆಲಗಳಲ್ಲಿ ಸಾಗುವ ವೀಡಿಯೋದಲ್ಲಿದೆ.
ವಿನೂತನವಾಗಿ ಮಂತ್ರಾಕ್ಷತೆ ವಿತರಣೆ ಮಾಡಬೇಕೆಂದು ಯೊಜನೆ ರೂಪಿಸಿದ್ದೆವು. ಈ ವೀಡಿಯೋ ಈ ರಾಮ ಜನ್ಮ ಭೂಮಿತೀರ್ಥ ಕ್ಷೇತ್ರತ ನ್ನಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವುದು ಖುಷಿ ತಂದಿದೆ. ಶತಮಾನಗಳ ಕನಸು ನನಸಾಗುತ್ತಿರುವುದು ಹೆಮ್ಮೆಯ ವಿಚಾರ ಎಂದು ಕಾರ್ಯಕ್ರಮ ರೂವಾರಿ ಮಹೇಶ್ ಶೆಣೈ ಬೈಲೂರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು