3:51 PM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ತಮಿಳುನಾಡು ನೂತನ ಸಿಎಂ ಆಗಿ ಸಿ ಜೋಸೆಫ್ ವಿಜಯ್ ಪ್ರಮಾಣ ವಚನ: ಸಿನಿಮಾ ಸ್ಟೈಲ್‌ನಲ್ಲಿ ಪ್ರಮಾಣವಚನ ಸ್ವೀಕಾರ

10/05/2026, 15:51

ಚೆನ್ನೈ(reporterkarnataka.com): ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಹಾಗೂ ನಟ ವಿಜಯ್‌ಗೆ ತಮಿಳುನಾಡಿನ 13ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ವಿಜಯ್ ಜೊತೆಯಲ್ಲಿ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಹುಮತದ ಸಂಖ್ಯೆಯಾದ 118 ಅನ್ನು ಮೀರಿ ಅವರು 120 ಶಾಸಕರ ಬೆಂಬಲ ಪತ್ರವನ್ನು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಶನಿವಾರ ಸಂಜೆ ಸಲ್ಲಿಸಿದ್ದರು.
ಇದರ ಬೆನ್ನಲ್ಲೇ ರಾಜ್ಯಪಾಲರು ವಿಜಯ್ ಪಕ್ಷವನ್ನು ಸರ್ಕಾರ ರಚನೆಗೆ ಆಹ್ವಾನಿಸಲಾಗಿತ್ತು. ಇಂದು ಬೆಳಗ್ಗೆ ಜವಾಹರಲಾಲ್‌ ನೆಹರು ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆದಿದೆ. ಮೇ 13ರೊಳಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ನಿಯೋಜಿತ ಸಿಎಂ ವಿಜಯ್‌ಗೆ ರಾಜ್ಯಪಾಲರು ಸೂಚಿಸಿದ್ದಾರೆ.
ವಿಜಯ್ ಜೊತೆ 9 ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.
ಎನ್.ಆನಂದ್, ಅಧವ್ ಅರ್ಜುನ್, ಡಾ.ಕೆ.ಜಿ.ಅರುಣ್‌ರಾಜ್, ಕೆಎ ಸೆಂಗೊಟಯ್ಯನ್, ಪಿ.ವೆಂಕಟರಮಣಂ, ಆರ್.ನಿರ್ಮಲ್‌ಕುಮಾರ್, ರಾಜಮೋಹನ್, ಡಾ.ಟಿಕೆ ಪ್ರಭು, ಸೆಲ್ವಿ ಎಸ್ ಕೀರ್ತನಾ
234 ಸದಸ್ಯಬಲದ ತಮಿಳುನಾಡಿನಲ್ಲಿ ಸರಳ ಬಹುಮತಕ್ಕೆ 118 ಸ್ಥಾನಗಳು ಅಗತ್ಯ. ಟಿವಿಕೆ 108 ಸ್ಥಾನಗಳನ್ನು ಹೊಂದಿದೆ. ಆದರೆ ವಿಜಯ್‌ 2 ಕ್ಷೇತ್ರದಲ್ಲಿ ಗೆದ್ದ ಕಾರಣ ಅದರ ಬಲವನ್ನು 107 ಎಂದು ಪರಿಗಣಿಸಲಾಗುತ್ತದೆ. ಬಹುಮತಕ್ಕೆ ಆರಂಭದಲ್ಲಿ 11 ಸ್ಥಾನಗಳ ಕೊರತೆಯನ್ನು ಎದುರಿಸುತ್ತಿತ್ತು. ಹೀಗಾಗಿ ಮೊದಲು ಕಾಂಗ್ರೆಸ್‌ ಪಕ್ಷ ಅವರನ್ನು ಬೆಂಬಲಿಸಿತ್ತು. ಪರಿಣಾಮವಾಗಿ ಮೈತ್ರಿಕೂಟದ ಬಲ 112ಕ್ಕೆ ಏರಿತ್ತು. ಬಳಿಕ ಸಿಪಿಎಂನ 2 ಹಾಗೂ ಸಿಪಿಐನ 2 ಶಾಸಕರು ಬೆಂಬಲ ಘೋಷಿಸಿದ್ದರು. ಆಗ ಬಲ 116ಕ್ಕೆ ಏರಿತ್ತು. ಇದೀಗ ಸಿವಿಕೆಯ 2 ಹಾಗೂ ಮುಸ್ಲಿಂ ಲೀಗ್‌ನ 2 ಶಾಸಕರ ಬೆಂಬಲದೊಂದಿಗೆ 118ರ ಮ್ಯಾಜಿಕ್‌ ಸಂಖ್ಯೆ ದಾಟಿ 120ಕ್ಕೆ ಕೂಟದ ಬಲವರ್ಧನೆ ಆಗಿದೆ.
ಸಿಎಂ ದಳಪತಿ ವಿಜಯ್ ಅವರ ಗೆಳತಿ, ಖ್ಯಾತ ನಟಿ ತ್ರಿಷಾ ಸಾಂಪ್ರದಾಯಿಕ ಉಡುಪಿನಲ್ಲಿ ಪದಗ್ರಹಣ ಸಮಾರಂಭಕ್ಕೆ ಆಗಮಿಸಿದ್ದರು. ಕಾರ್‌ನಿಂದ ಇಳಿಯುತ್ತಲೇ ಜನರತ್ತ ಸಂತೋಷದಿಂದ ಕೈಬೀಸಿದರು. ತ್ರಿಷಾ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಘೋಷಣೆ ಕೂಗಲು ಆರಂಭಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು