7:38 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ನಮ್ಮ ಸಚಿವರು, ಶಾಸಕರು ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗದೆ ಕೇಶವ ಕೃಪಾಕ್ಕೆ ಹೋಗಲಾಗುತ್ತಾ?: ಮಂಗಳೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ

22/02/2025, 17:48

ಮಂಗಳೂರು(reporterkarnataka.com); ಕಾಂಗ್ರೆಸ್ ಶಾಸಕರು, ಸಚಿವರು ನಮ್ಮ ಹೈಕಮಾಂಡ್ ನಾಯಕರನ್ನು ಭೇಟಿಯಾಗದೆ ಕೇಶವ ಕೃಪಾಕ್ಕೆ ಹೋಗಲಾಗುತ್ತದಾ? ಮೋದಿಯವರನ್ನು, ನಡ್ಡಾ ಅವರನ್ನು ಭೇಟಿಯಾಗಲಾಗುತ್ತದಾ ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ನಗರದಲ್ಲಿ ಶನಿವಾರ ಮಾಧ್ಯಮ ಜತೆ ಮಾತನಾಡಿದ ಅವರು, ಮೂವರು ಕಾಂಗ್ರೆಸ್ ಸಚಿವರು ಹೈಕಮಾಂಡ್ ಭೇಟಿಯಾದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು.
ನಮ್ಮ ಸಚಿವರು, ಶಾಸಕರು ನಮ್ಮ ಹೈಕಮಾಂಡ್ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ. ವೇಣುಗೋಪಾಲ್, ಖರ್ಗೆ, ರಾಹುಲ್ ಗಾಂಧಿ ಅವರನ್ನು ಭೇಟಿಯಾದಲ್ಲಿ ತಪ್ಪೇನಿದೆ ಎಂದರು.
ಗೃಹಲಕ್ಷ್ಮೀ ಬಗ್ಗೆ ಕೇಳಲಾದ ಪ್ರಶ್ನಿಗೆ ಉತ್ತರಿಸಿದ ಅವರು, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ವಾರದೊಳಗೆ ಗೃಹಲಕ್ಷ್ಮೀ ಹಣ ಹಾಕಯವುದಾಗಿ ಹೇಳಿದ್ದಾರೆ. ವಿಳಂಬವಾಗಿರುವುದು ನಿಜ. ಆದರೆ, ವಾರದೊಳಗೆ ಹಣ ಹಾಕುವುದಾಗಿ ಹೇಳಿದ್ದಾರೆ. ಆದರೆ, ಬಿ
ಬಿಟ್ಟಿ ಯೋಜನೆ ಎಂದು ಟೀಕಿಸಿದ ಬಿಜೆಪಿಯರಿಗೆ ಇದೆಲ್ಲ ಯಾಕೆ ಬೇಕು? ಅವರ ಕಾರ್ಯಕರ್ತೆಯರು ಕೂಡ ಗೃಹಲಕ್ಷ್ಮೀ ಹಣ ಪಡೆಯುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದರು.
ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆ ನಡೆಯುತ್ತದೆ. ಕೆಪಿಸಿಸಿ ಅಧ್ಯಕ್ಷರ, ಮುಖ್ಯಮಂತ್ರಿಗಳ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಯುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು