8:00 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ರಕ್ತದಾನ ಶಿಬಿರ: ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳಿಂದ 156 ಯೂನಿಟ್ ಸಂಗ್ರಹ

30/11/2023, 19:17

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಘಟಕಗಳು, ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್, ಎಚ್ ಡಿಎಫ್ ಸಿ ಬ್ಯಾಂಕ್ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಜಂಟಿಯಾಗಿ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು.


ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಶಾಂತರಾಮ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. “ಅಗತ್ಯವಿರುವ ವ್ಯಕ್ತಿಗೆ ರಕ್ತದಾನ ಮಾಡುವುದು ಮನುಕುಲದ ಅಸಾಧಾರಣ ಸೇವೆ. ರಕ್ತಕ್ಕೆ ಧರ್ಮವಿಲ್ಲ, ಅದು ಅನನ್ಯ. ಜೀವ ಉಳಿಸುವ ದ್ರವವು ಒಬ್ಬ ವ್ಯಕ್ತಿಯನ್ನು ಸಾವಿನ ದವಡೆಯಿಂದ ರಕ್ಷಿಸುವ ಸಾಮರ್ಥ್ಯವನ್ನು ಹೊಂದಿದೆ. ವರ್ಷಕ್ಕೆ ಮೂರು ಬಾರಿ ರಕ್ತದಾನ ಮಾಡುವುದರಿಂದ ಆರೋಗ್ಯವಂತರಾಗಿ ಬಾಳಬಹುದು ಎಂದರು. ಲಯನ್ಸ್ ಕ್ಲಬ್ ನ ಗಣೇಶ್ ಡಿ. ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ರಕ್ತದಾನವು ಮಾನವೀಯತೆಯ ಸೂಚಕವಾಗಿದೆ. ಇದು ಆರ್ಥಿಕ ವೆಚ್ಚವಿಲ್ಲದ ಉದಾತ್ತ ಕಾರ್ಯವಾಗಿದೆ ಎಂದು ಹೇಳಿದರು.
ಮಂಗಳೂರು ಎಚ್ ಡಿಎಫ್ ಸಿ ಬ್ಯಾಂಕ್ ವ್ಯವಸ್ಥಾಪಕ ಕಿರಣ್ ಶೆಟ್ಟಿ ಅವರು ಶುಭ ಹಾರೈಸಿದರು. ಕೆನರಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಎಂ.ರಂಗನಾಥ ಭಟ್ ಅಧ್ಯಕ್ಷತೆ ವಹಿಸಿದ್ದು,ಮಾನವೀಯತೆ ಇನ್ನೊಬ್ಬರಿಗೆ ಸಲ್ಲಿಸುವ ಸಮರ್ಪಣೆಯಲ್ಲಿ ಅಡಗಿದೆ. ಅದು ಪದಗಳಿಗೆ ಮೀರಿದ ತೃಪ್ತಿ ನೀಡುತ್ತದೆ. ಅವುಗಳಲ್ಲಿ ರಕ್ತದಾನವು ಒಂದು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ. ಸ್ವಾಗತಿಸಿದರು. ರಾಸೇಯೋ ಅಧಿಕಾರಿ ಸೀಮಾ ಪ್ರಭು ಎಸ್. ವಂದಿಸಿದರು. ಲಿಖಿತ್ ನಿರೂಪಿಸಿದರು. ಕಾಲೇಜಿನ ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ , ಯೂತ್ ರೆಡ್ ಕ್ರಾಸ್ ಅಧಿಕಾರಿಗಳಾದ ರೂಪಶ್ರೀ, ರಶ್ಮಿ , ರಾಸೇಯೋ ಅಧಿಕಾರಿ ಕೀರ್ತನಾ ಎಂ. ಭಟ್, ಲಯನ್ಸ್ ಸೇವಾ ಸಂಸ್ಥೆಯ ವಿವಿಧ ಪದಾಧಿಕಾರಿಗಳಾದ ಉಮಾ ಬಿ. ಹೆಗ್ಡೆ, ಸುಮಿತ್ರಾ ಶೆಟ್ಟಿ, ವಿನೋದ್ ಪ್ರಭು, ವಿದ್ಯಾ ಕಾಮತ್, ಮಾಲಾ ಕಿಶೋರ್, ಸಂಧ್ಯಾ, ಸತೀಶನ್ ಮುಂತಾದವರು ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳಿಂದ 156 ಯೂನಿಟ್ ರಕ್ತವನ್ನು ಸಂಗ್ರಹಿಸುವ ಮೂಲಕ ಕಾರ್ಯಕ್ರಮವು ಯಶಸ್ವಿಯಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು