4:25 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ

03/11/2023, 22:39

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಭಾರತ ರತ್ನ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ವನ್ನು ಆಚರಿಸಲಾಯಿತು.


18 ಕರ್ನಾಟಕ ಬೆಟಾಲಿಯನ್ ಎನ್‌.ಸಿ.ಸಿ ಇದರ ಆಡಳಿತಾಧಿಕಾರಿ ಲೆ. ಕರ್ನಲ್ ಗ್ರೇಷಿಯನ್ ಸಿಕ್ವೇರಾ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದು,ಭಾರತವು ಅಖಂಡವಾಗಿ ತಲೆಯೆತ್ತಿ ನಿಲ್ಲಲು ಕಾರಣರಾದವರು ಸರ್ದಾರ್ ವಲ್ಲಭಾಯಿ ಪಟೇಲರು. ನಮ್ಮ ದೇಹದ ಪ್ರತಿಯೊಂದು ಅಂಗಗಳು ಸರಿಯಾಗಿ ಕೆಲಸ ಮಾಡುವಂತೆ ಜಾತಿ ಮತ ಧರ್ಮ ಕಾಗಿ ಹೋರಾಡದೆ ದೇಶದ ಒಳಿತಿಗಾಗಿ ಒಂದಾಗಿ ಹೋರಾಡಬೇಕು ಎಂದರು. ಧರ್ಮವು ಪ್ರತಿಯೊಬ್ಬರೂ ಒಳ್ಳೆಯ ಮನುಷ್ಯನಾಗಲು ಹೇಳಿಕೊಡುತ್ತದೆ. ನನಗೆ ಇಂದು ಸಿಗುತ್ತಿರುವ ಗೌರವ ನನ್ನ ಸಮವಸ್ತ್ರದಿಂದ. ಇದು ಭಾರತ ದೇಶ ಕೊಟ್ಟಿರುವ ಸಮವಸ್ತ್ರ. ಈ ರಾಷ್ಟ್ರದ ಏಕತೆ, ಸೌಹಾರ್ದತೆ, ಸುರಕ್ಷೆ ನಮ್ಮ ಕೈಯಲ್ಲಿದೆ ಎಂದು ಅವರು ನುಡಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅಧ್ಯಕ್ಷತೆ ವಹಿಸಿದ್ದು ಉಕ್ಕಿನ ಮನುಷ್ಯ ಪಟೇಲರ ಕೊಡುಗೆಯನ್ನು ಸ್ಮರಿಸಿ ವಿದ್ಯಾರ್ಥಿಗಳಿಗೆ ಏಕತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಅನಸೂಯ ಭಾಗವತ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು. ಇನ್ನೋರ್ವ ಸಂಯೋಜಕಿ ಪ್ರತಿಮಾ ಬಾಳಿಗ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ ನಾಯಕ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು