5:28 AM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ

03/11/2023, 22:39

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಭಾರತ ರತ್ನ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ವನ್ನು ಆಚರಿಸಲಾಯಿತು.


18 ಕರ್ನಾಟಕ ಬೆಟಾಲಿಯನ್ ಎನ್‌.ಸಿ.ಸಿ ಇದರ ಆಡಳಿತಾಧಿಕಾರಿ ಲೆ. ಕರ್ನಲ್ ಗ್ರೇಷಿಯನ್ ಸಿಕ್ವೇರಾ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದು,ಭಾರತವು ಅಖಂಡವಾಗಿ ತಲೆಯೆತ್ತಿ ನಿಲ್ಲಲು ಕಾರಣರಾದವರು ಸರ್ದಾರ್ ವಲ್ಲಭಾಯಿ ಪಟೇಲರು. ನಮ್ಮ ದೇಹದ ಪ್ರತಿಯೊಂದು ಅಂಗಗಳು ಸರಿಯಾಗಿ ಕೆಲಸ ಮಾಡುವಂತೆ ಜಾತಿ ಮತ ಧರ್ಮ ಕಾಗಿ ಹೋರಾಡದೆ ದೇಶದ ಒಳಿತಿಗಾಗಿ ಒಂದಾಗಿ ಹೋರಾಡಬೇಕು ಎಂದರು. ಧರ್ಮವು ಪ್ರತಿಯೊಬ್ಬರೂ ಒಳ್ಳೆಯ ಮನುಷ್ಯನಾಗಲು ಹೇಳಿಕೊಡುತ್ತದೆ. ನನಗೆ ಇಂದು ಸಿಗುತ್ತಿರುವ ಗೌರವ ನನ್ನ ಸಮವಸ್ತ್ರದಿಂದ. ಇದು ಭಾರತ ದೇಶ ಕೊಟ್ಟಿರುವ ಸಮವಸ್ತ್ರ. ಈ ರಾಷ್ಟ್ರದ ಏಕತೆ, ಸೌಹಾರ್ದತೆ, ಸುರಕ್ಷೆ ನಮ್ಮ ಕೈಯಲ್ಲಿದೆ ಎಂದು ಅವರು ನುಡಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅಧ್ಯಕ್ಷತೆ ವಹಿಸಿದ್ದು ಉಕ್ಕಿನ ಮನುಷ್ಯ ಪಟೇಲರ ಕೊಡುಗೆಯನ್ನು ಸ್ಮರಿಸಿ ವಿದ್ಯಾರ್ಥಿಗಳಿಗೆ ಏಕತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಅನಸೂಯ ಭಾಗವತ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು. ಇನ್ನೋರ್ವ ಸಂಯೋಜಕಿ ಪ್ರತಿಮಾ ಬಾಳಿಗ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ ನಾಯಕ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು