2:31 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ

03/11/2023, 22:39

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಭಾರತ ರತ್ನ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ವನ್ನು ಆಚರಿಸಲಾಯಿತು.


18 ಕರ್ನಾಟಕ ಬೆಟಾಲಿಯನ್ ಎನ್‌.ಸಿ.ಸಿ ಇದರ ಆಡಳಿತಾಧಿಕಾರಿ ಲೆ. ಕರ್ನಲ್ ಗ್ರೇಷಿಯನ್ ಸಿಕ್ವೇರಾ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದು,ಭಾರತವು ಅಖಂಡವಾಗಿ ತಲೆಯೆತ್ತಿ ನಿಲ್ಲಲು ಕಾರಣರಾದವರು ಸರ್ದಾರ್ ವಲ್ಲಭಾಯಿ ಪಟೇಲರು. ನಮ್ಮ ದೇಹದ ಪ್ರತಿಯೊಂದು ಅಂಗಗಳು ಸರಿಯಾಗಿ ಕೆಲಸ ಮಾಡುವಂತೆ ಜಾತಿ ಮತ ಧರ್ಮ ಕಾಗಿ ಹೋರಾಡದೆ ದೇಶದ ಒಳಿತಿಗಾಗಿ ಒಂದಾಗಿ ಹೋರಾಡಬೇಕು ಎಂದರು. ಧರ್ಮವು ಪ್ರತಿಯೊಬ್ಬರೂ ಒಳ್ಳೆಯ ಮನುಷ್ಯನಾಗಲು ಹೇಳಿಕೊಡುತ್ತದೆ. ನನಗೆ ಇಂದು ಸಿಗುತ್ತಿರುವ ಗೌರವ ನನ್ನ ಸಮವಸ್ತ್ರದಿಂದ. ಇದು ಭಾರತ ದೇಶ ಕೊಟ್ಟಿರುವ ಸಮವಸ್ತ್ರ. ಈ ರಾಷ್ಟ್ರದ ಏಕತೆ, ಸೌಹಾರ್ದತೆ, ಸುರಕ್ಷೆ ನಮ್ಮ ಕೈಯಲ್ಲಿದೆ ಎಂದು ಅವರು ನುಡಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅಧ್ಯಕ್ಷತೆ ವಹಿಸಿದ್ದು ಉಕ್ಕಿನ ಮನುಷ್ಯ ಪಟೇಲರ ಕೊಡುಗೆಯನ್ನು ಸ್ಮರಿಸಿ ವಿದ್ಯಾರ್ಥಿಗಳಿಗೆ ಏಕತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಅನಸೂಯ ಭಾಗವತ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು. ಇನ್ನೋರ್ವ ಸಂಯೋಜಕಿ ಪ್ರತಿಮಾ ಬಾಳಿಗ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ ನಾಯಕ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು