10:54 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ ಉದ್ಘಾಟನೆ

30/03/2023, 22:55

ಮಂಗಳೂರು(reporterkarnataka.com): ಧ್ಯೇಯ, ಧೈರ್ಯ, ವಿಶ್ವಾಸಾರ್ಹತೆ, ಪ್ರಶಂಸೆಯ ಜತೆಗೆ ಉತ್ತಮ ಸಂವಹನ ಕೌಶಲವಿದ್ದಾಗ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ,ಬದುಕು ರೂಪಿಸಿಕೊಳ್ಳಬಹುದು. ನಮ್ಮ ದೇಶದಲ್ಲಿ ಶಿಕ್ಷಣ ವಂಚಿತರು, ವಿಕಲ ಚೇತನರು, ಮಾನಸಿಕ ಅಸ್ವಸ್ಥರು, ಬಾಲ ಕಾರ್ಮಿಕರು ಹೀಗೆ ಸಾಕಷ್ಟು ಮಂದಿ ಅವಕಾಶವಂಚಿತರಿದ್ದಾರೆ. ಆದರೆ ಅವಕಾಶಗಳ ನಡುವೆ ಬದುಕುತ್ತಿರುವ ಅದೃಷ್ಟವಂತರಾದ ನಾವು ನಮ್ಮ ಸಾಮಥ್ಯವನ್ನು ಅಭಿವೃದ್ಧಿಗೆ ಬಳಸಿಕೊಳ್ಳುವ ಮೂಲಕ ವ್ಯಕ್ತಿತ್ವದ ಜತೆಗೆ ಸಾಂಸ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದು ಮಂಗಳೂರಿನ ಸ್ವಸ್ತಿಕ್ ನ್ಯಾಶನಲ್ ಸ್ಕೂಲ್ ಅಧ್ಯಕ್ಷ, ಸ್ವಸ್ತಿಕ್ ಕನ್ಸಲ್ಟೆನ್ಸಿ ಸರ್ವಿಸ್ ನ ಸಿ.ಒ.ಒ. ಡಾ.ರಾಘವೇಂದ್ರ ಹೊಳ್ಳ ಎನ್. ಹೇಳಿದರು.
ಅವರು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ಆರಂಭಗೊಂಡ ಮೂರು ದಿನಗಳ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವವನ್ನು ದೀಪಪ್ರಜ್ವಲನದೊಂದಿಗೆ ಉದ್ಘಾಟಿಸಿ ಮಾತನಾಡಿದರು.

ಬೆಂಜನಪದವು ಪರಿಸರದಲ್ಲಿ ಎರಡೂವರೆ ದಶಕಗಳ ಹಿಂದೆ ಇಂಜಿನಿಯರಿಂಗ್ ಕಾಲೇಜನ್ನು ಆರಂಭಿಸುವ ಮೂಲಕ ಈ ಭಾಗದ ಯುವಜನತೆಗೆ ತಾಂತ್ರಿಕ ಶಿಕ್ಷಣ, ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸಿದ ಕೆನರಾ ಶಿಕ್ಷಣ ಸಂಸ್ಥೆ ಇದೀಗ ವಿಕಾಸದ ಹಾದಿಯಲ್ಲಿದ್ದು ಮುಂದಿನ ದಿನಗಳಲ್ಲಿ ವಿಶ್ವವಿದ್ಯಾನಿಲಯವಾಗಿ ಬೆಳೆಯುವಂತಾಗಲಿ ಎಂದವರು ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಡಿ. ವಾಸುದೇವ ಕಾಮತ್ ಶುಭ ಹಾರೈಸಿದರು.
ಕಾಲೇಜು ಸಂಚಾಲಕ, ಆಡಳಿತ ಮಂಡಳಿ ಕಾರ್ಯದರ್ಶಿ ಎಂ. ರಂಗನಾಥ ಭಟ್ ಮಾತನಾಡಿ ಆಡಳಿತ ಮಂಡಳಿಯ ಜತೆ ಕಾರ್ಯದರ್ಶಿಗಳಾದ ಟಿ. ಗೋಪಾಲಕೃಷ್ಣ ಶೆಣೈ, ಕೆ.ಸುರೇಶ್ ಕಾಮತ್, ಸದಸ್ಯ ಬಸ್ತಿ ಪುರುಷೋತ್ತಮ ಶೆಣೈ, ಆಕೃತಿ ಉತ್ಸವದ ಪ್ರಧಾನ ಸಮನ್ವಯಕಾರ ನವೀನ್ ಎ.ಕಲಾಲ್,ವಿದ್ಯಾರ್ಥಿ ಸಮನ್ವಯಕಾರರಾದ ಶ್ರೀಹರಿ ಭಟ್, ವಿಘ್ನೇಶ್ ಕಾಮತ್,ತಾರಾ ಕಾಮತ್ ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷ ಪ್ರಣೀತ್ ಶೆಟ್ಟಿ,ಉಪಾಧ್ಯಕ್ಷ ವಿಜಯರಾಜ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ.ಗಣೇಶ್ ವಿ.ಭಟ್ ವಾರ್ಷಿಕ ವರದಿ ವಾಚಿಸಿದರು. ಸಹ ಪ್ರಾಧ್ಯಾಪಕಿ ಕ್ಯಾರಲ್ ಡಿ.ಮೆಲ್ಲೋ ಅತಿಥಿಯನ್ನು ಪರಿಚಯಿಸಿದರು. ಪ್ರತಿಭಾನ್ವಿತರು,ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿದ್ಯಾರ್ಥಿ ಕೌನ್ಸಿಲ್ ಜತೆ ಕಾರ್ಯದರ್ಶಿ ಆಶಯ್ ಶೆಟ್ಟಿ ಸಾಧಕ, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಎ.ಐ.ಎಂ.ಎಲ್ ವಿಭಾಗ ಮುಖ್ಯಸ್ಥ ಡಾ.ಬಸಪ್ಪ ಬಿ. ಕೊಡದ ಸ್ವಾಗತಿಸಿದರು. ವಿದ್ಯಾರ್ಥಿ ಕೌನ್ಸಿಲ್ ಕಾರ್ಯದರ್ಶಿ ಆದಿತ್ಯ ಪೈ ವಂದಿಸಿದರು. ವಿದ್ಯಾರ್ಥಿಗಳಾದ ವಿಘ್ನೇಶ್ ಭಕ್ತ, ಮೇಘಶ್ರೀ ಕಾಮತ್ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭಕ್ಕೂ ಮೊದಲು ಕಾಲೇಜಿನ ಅಕಾಡೆಮಿಕ್ ಬ್ಲಾಕ್ನಲ್ಲಿ ನೂತನ ಸೆಮಿನಾರ್ ಹಾಲ್, ಡೀನ್ಸ್ ಕ್ಯಾಬಿನ್ಸ್, ಸ್ಕಿಲ್ ಲ್ಯಾಬ್ ಸಹಿತ ನವೀಕೃತ ಲ್ಯಾಬ್ ಗಳನ್ನು ಗಣ್ಯರು ಉದ್ಘಾಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು