5:16 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ ಉದ್ಘಾಟನೆ

30/03/2023, 22:55

ಮಂಗಳೂರು(reporterkarnataka.com): ಧ್ಯೇಯ, ಧೈರ್ಯ, ವಿಶ್ವಾಸಾರ್ಹತೆ, ಪ್ರಶಂಸೆಯ ಜತೆಗೆ ಉತ್ತಮ ಸಂವಹನ ಕೌಶಲವಿದ್ದಾಗ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ,ಬದುಕು ರೂಪಿಸಿಕೊಳ್ಳಬಹುದು. ನಮ್ಮ ದೇಶದಲ್ಲಿ ಶಿಕ್ಷಣ ವಂಚಿತರು, ವಿಕಲ ಚೇತನರು, ಮಾನಸಿಕ ಅಸ್ವಸ್ಥರು, ಬಾಲ ಕಾರ್ಮಿಕರು ಹೀಗೆ ಸಾಕಷ್ಟು ಮಂದಿ ಅವಕಾಶವಂಚಿತರಿದ್ದಾರೆ. ಆದರೆ ಅವಕಾಶಗಳ ನಡುವೆ ಬದುಕುತ್ತಿರುವ ಅದೃಷ್ಟವಂತರಾದ ನಾವು ನಮ್ಮ ಸಾಮಥ್ಯವನ್ನು ಅಭಿವೃದ್ಧಿಗೆ ಬಳಸಿಕೊಳ್ಳುವ ಮೂಲಕ ವ್ಯಕ್ತಿತ್ವದ ಜತೆಗೆ ಸಾಂಸ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದು ಮಂಗಳೂರಿನ ಸ್ವಸ್ತಿಕ್ ನ್ಯಾಶನಲ್ ಸ್ಕೂಲ್ ಅಧ್ಯಕ್ಷ, ಸ್ವಸ್ತಿಕ್ ಕನ್ಸಲ್ಟೆನ್ಸಿ ಸರ್ವಿಸ್ ನ ಸಿ.ಒ.ಒ. ಡಾ.ರಾಘವೇಂದ್ರ ಹೊಳ್ಳ ಎನ್. ಹೇಳಿದರು.
ಅವರು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ಆರಂಭಗೊಂಡ ಮೂರು ದಿನಗಳ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವವನ್ನು ದೀಪಪ್ರಜ್ವಲನದೊಂದಿಗೆ ಉದ್ಘಾಟಿಸಿ ಮಾತನಾಡಿದರು.

ಬೆಂಜನಪದವು ಪರಿಸರದಲ್ಲಿ ಎರಡೂವರೆ ದಶಕಗಳ ಹಿಂದೆ ಇಂಜಿನಿಯರಿಂಗ್ ಕಾಲೇಜನ್ನು ಆರಂಭಿಸುವ ಮೂಲಕ ಈ ಭಾಗದ ಯುವಜನತೆಗೆ ತಾಂತ್ರಿಕ ಶಿಕ್ಷಣ, ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸಿದ ಕೆನರಾ ಶಿಕ್ಷಣ ಸಂಸ್ಥೆ ಇದೀಗ ವಿಕಾಸದ ಹಾದಿಯಲ್ಲಿದ್ದು ಮುಂದಿನ ದಿನಗಳಲ್ಲಿ ವಿಶ್ವವಿದ್ಯಾನಿಲಯವಾಗಿ ಬೆಳೆಯುವಂತಾಗಲಿ ಎಂದವರು ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಡಿ. ವಾಸುದೇವ ಕಾಮತ್ ಶುಭ ಹಾರೈಸಿದರು.
ಕಾಲೇಜು ಸಂಚಾಲಕ, ಆಡಳಿತ ಮಂಡಳಿ ಕಾರ್ಯದರ್ಶಿ ಎಂ. ರಂಗನಾಥ ಭಟ್ ಮಾತನಾಡಿ ಆಡಳಿತ ಮಂಡಳಿಯ ಜತೆ ಕಾರ್ಯದರ್ಶಿಗಳಾದ ಟಿ. ಗೋಪಾಲಕೃಷ್ಣ ಶೆಣೈ, ಕೆ.ಸುರೇಶ್ ಕಾಮತ್, ಸದಸ್ಯ ಬಸ್ತಿ ಪುರುಷೋತ್ತಮ ಶೆಣೈ, ಆಕೃತಿ ಉತ್ಸವದ ಪ್ರಧಾನ ಸಮನ್ವಯಕಾರ ನವೀನ್ ಎ.ಕಲಾಲ್,ವಿದ್ಯಾರ್ಥಿ ಸಮನ್ವಯಕಾರರಾದ ಶ್ರೀಹರಿ ಭಟ್, ವಿಘ್ನೇಶ್ ಕಾಮತ್,ತಾರಾ ಕಾಮತ್ ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷ ಪ್ರಣೀತ್ ಶೆಟ್ಟಿ,ಉಪಾಧ್ಯಕ್ಷ ವಿಜಯರಾಜ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ.ಗಣೇಶ್ ವಿ.ಭಟ್ ವಾರ್ಷಿಕ ವರದಿ ವಾಚಿಸಿದರು. ಸಹ ಪ್ರಾಧ್ಯಾಪಕಿ ಕ್ಯಾರಲ್ ಡಿ.ಮೆಲ್ಲೋ ಅತಿಥಿಯನ್ನು ಪರಿಚಯಿಸಿದರು. ಪ್ರತಿಭಾನ್ವಿತರು,ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿದ್ಯಾರ್ಥಿ ಕೌನ್ಸಿಲ್ ಜತೆ ಕಾರ್ಯದರ್ಶಿ ಆಶಯ್ ಶೆಟ್ಟಿ ಸಾಧಕ, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಎ.ಐ.ಎಂ.ಎಲ್ ವಿಭಾಗ ಮುಖ್ಯಸ್ಥ ಡಾ.ಬಸಪ್ಪ ಬಿ. ಕೊಡದ ಸ್ವಾಗತಿಸಿದರು. ವಿದ್ಯಾರ್ಥಿ ಕೌನ್ಸಿಲ್ ಕಾರ್ಯದರ್ಶಿ ಆದಿತ್ಯ ಪೈ ವಂದಿಸಿದರು. ವಿದ್ಯಾರ್ಥಿಗಳಾದ ವಿಘ್ನೇಶ್ ಭಕ್ತ, ಮೇಘಶ್ರೀ ಕಾಮತ್ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭಕ್ಕೂ ಮೊದಲು ಕಾಲೇಜಿನ ಅಕಾಡೆಮಿಕ್ ಬ್ಲಾಕ್ನಲ್ಲಿ ನೂತನ ಸೆಮಿನಾರ್ ಹಾಲ್, ಡೀನ್ಸ್ ಕ್ಯಾಬಿನ್ಸ್, ಸ್ಕಿಲ್ ಲ್ಯಾಬ್ ಸಹಿತ ನವೀಕೃತ ಲ್ಯಾಬ್ ಗಳನ್ನು ಗಣ್ಯರು ಉದ್ಘಾಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು