6:24 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಕೋವಿಡ್  ಲಸಿಕೆ ಅಭಿಯಾನಕ್ಕೆ  ಚಾಲನೆ; 600 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್

30/06/2021, 22:34

ಮಂಗಳೂರು (reporterkarnataka): ದ.ಕ. ಜಿಲ್ಲಾಡಳಿತ ಹಾಗೂ ರಾ.ಸೇ.ಯೋ ಸಹಭಾಗಿತ್ವದಲ್ಲಿ ಉಚಿತ ಲಸಿಕಾ  ಅಭಿಯಾನವು ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗಾಗಿ  ಬುಧವಾರ ಕಾಲೇಜಿನಲ್ಲಿ ಜರುಗಿತು.

 ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ  ಡಾ. ಧನಶ್ರೀ  ಅಭಿಯಾನವನ್ನು ಉದ್ಘಾಟಿಸಿದರು. ಕೆನರಾ ಸಮೂಹ ಸಂಸ್ಥೆಗಳ ಖಜಾಂಜಿ ಸಿ.ಎ. ಶ್ರೀ ಎಂ. ವಾಮನ ಕಾಮತ್, ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ., ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಅನಿಲಾ, ಕೆನರಾ ಸಮೂಹ ಸಂಸ್ಥೆಯ ಶ್ರೀ ಗುರುದತ್ತ ಭಾಗವತ್, ಐಕ್ಯೂಎಸಿ ಸಂಯೋಜಕಿ ದೇಜಮ್ಮ ಎ., ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಸೀಮಾ ಪ್ರಭು ಎಸ್.  ಮುಂತಾದವರು ಉಪಸ್ಥಿತರಿದ್ದರು. ಸುಮಾರು 600 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ೧೯ ಲಸಿಕೆ ನೀಡಲಾಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ನ ಘಟಕ  ಹಾಗೂ ರಾ.ಸೇ.ಯೋ ಸ್ವಯಂ ಸೇವಕರು ಅಭಿಯಾನಕ್ಕೆ  ಸಹಕಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು