7:49 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ 2ನೇ ಡೊಸ್ ಕೋವಿಡ್ ಲಸಿಕೆ ಅಭಿಯಾನ ; 300 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್

09/08/2021, 22:24

ಮಂಗಳೂರು(reporterkarnata.com): ದ.ಕ.ಜಿಲ್ಲಾಡಳಿತ ಹಾಗೂ ರಾ.ಸೇ.ಯೋ ಸಹಭಾಗಿತ್ವದಲ್ಲಿ 3ನೇ ಹಂತದ ಉಚಿತ ಲಸಿಕಾ  ಅಭಿಯಾನವು ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗಾಗಿ  ಸೋಮವಾರ ಕಾಲೇಜಿನಲ್ಲಿ ಜರುಗಿತು.


ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಲಸಿಕಾ ಅಭಿಯಾನಕ್ಕೆ ಭೇಟಿ ನೀಡಿ ಕೋವಿಡ್ ನಿಯಮ ಪಾಲನೆ ವೀಕ್ಷಿಸಿ, ಸಾಮಾಜಿಕ ಅಂತರ , ಮಾಸ್ಕ್ ಧರಿಸಿ ನಿಯಮ ಪಾಲಿಸಿ ಸುರಕ್ಷತೆ ಯನ್ನು ಕಾಪಾಡಿದ ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜು ಸಿಬ್ಬಂದಿಗಳಿಗೆ ಅಭಿನಂದಿಸಿದರು.


ಬಂದರು ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ.ಚಂದ್ರಪ್ರಭಾ,ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ., ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಅನಿಲಾ, ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಸೀಮಾ ಪ್ರಭು ಎಸ್. ಯುವ ರೆಡ್ ಕ್ರಾಸ್ ನ ಅಧಿಕಾರಿ ಸ್ಮಿತಾ ಎಂ, ರೂಪಶ್ರೀ ಕೆ.ಪಿ, ರೋವರ್ಸ್ ಮತ್ತು ರೇಂಜರ್ಸ್ ನ ಘಟಕದ ಅಧಿಕಾರಿ ಕಾರ್ತಿಕ್ ಮುಂತಾದವರು ಉಪಸ್ಥಿತರಿದ್ದರು.

ಸುಮಾರು 300 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ೧೯ ಲಸಿಕೆಯ ಎರಡನೇ ಡೊಸ್ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ನ ಘಟಕ  ಹಾಗೂ ರಾ.ಸೇ.ಯೋ ಸ್ವಯಂ ಸೇವಕರು ಅಭಿಯಾನಕ್ಕೆ  ಸಹಕಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು