10:15 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಅಂಗಾಂಗದಾನ, ನೇತ್ರದಾನ ಮತ್ತು ನೋಂದಣಿ ಜಾಗೃತಿ ಅಭಿಯಾನ

28/11/2022, 20:35

ಮಂಗಳೂರು(reporterkarnataka.com): “ನಮ್ಮ ಸಮಾಜದಲ್ಲಿ ದಾನ ಎಂಬುದು ಕರುಣೆ,ಪ್ರೀತಿ, ದಯೆ ಮೊದಲಾದ ಮೌಲ್ಯಗಳನ್ನೊಳಗೊಂಡ ನಮಗ್ರ ಆದರ್ಶ. ಈ ಆದರ್ಶವನ್ನು ನಿಸ್ವಾರ್ಥದಿಂದ ಪಾಲಿಸುವವರನ್ನು ಸಮಾಜ ಸರ್ವಕಾಲಕ್ಕೂ ಸ್ಮರಿಸುತ್ತದೆ. ಇಂತಹಾ ಆದರ್ಶವನ್ನು ಪಾಲಿಸಿದ ವ್ಯಕ್ತಿಗಳ ಹಾದಿಯಲ್ಲಿ ನಡೆಯಲು ನಮಗೆ ಅವಕಾಶ ಮಾಡಿಕೊಡುವ ಪುಣ್ಯಕರ ಕಾರ್ಯವೇ ಅಂಗಾಂಗ ದಾನ ಹಾಗೂ ನೇತ್ರದಾನ. ಇನ್ನೊಬ್ಬರ ಜೀವ ಉಳಿಸುವ,ಒಂದಷ್ಟು ಜನರ ಬದುಕಿಗೆ ಬೆಳಕಾಗುವ, ಸಾವಿನ ನಂತರವೂ ಮತ್ತೊಬ್ಬರಿಗೆ ಬದುಕು ನೀಡಿ, ಜನಮಾನಸದಲ್ಲಿ ನಮಗೆ ಬದುಕಲು ಇಂತಹ ದಾನದಿಂದ ಸಾಧ್ಯ. ಹಾಗಾಗಿ ಇದು ಎಲ್ಲಕ್ಕಿಂತ ಶ್ರೇಷ್ಠ ದಾನ.ಈ ರೀತಿಯ ಶ್ರೇಷ್ಠ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಿ ಜಾಗೃತಿ ಕಾರ್ಯ ಕೈಗೊಂಡಾಗ ಮಾತ್ರ ಅಂಗಾಂಗ ಹಾಗೂ ನೇತ್ರದಾನ ಜನರ ಅಭಿಯಾನವಾಗಿ,ಆಂದೋಲನವಾಗಿ ಬದಲಾಗಲು ಸಾಧ್ಯ” ಎಂದು ಅಂಗಾಂಗದಾನದ ಜಿಲ್ಲಾ ಮುಖ್ಯ ಸಂಯೋಜಕ ಲಯನ್ ಫಿಲಿಪ್ ಜೆ.ಪಿರೇರಾ ಹೇಳಿದರು.

ಅವರು ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಹಾಗೂ ಕದ್ರಿಯ ಲಯನ್ಸ್ ಹಾಗೂ ಲಿಯೋ ಕ್ಲಬ್ ನ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ನೇತ್ರದಾನ ಹಾಗೂ ಅಂಗಾಂಗದಾನ ಮತ್ತು ನೋಂದಣಿ ಅಭಿಯಾನದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕದ್ರಿ ಲಯನ್ಸ್ ಕ್ಲಬ್ ನ ಅಧ್ಯಕ್ಷೆ ಲಯನ್ ಸುಮಿತ್ರಾ ಶೆಟ್ಟಿ ಮಾತನಾಡಿ, ಅಂಗಾಂಗ ದಾನದ ಮಹತ್ವವನ್ನು ತಿಳಿಸಿ,ಈ ಒಂದು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಲಯನ್ ಜಯಕುಮಾರಿ ಸತೀಶನ್,ಲಯನ್ ರತ್ನಾಕರ್,ಲಯನ್ ಮಾಲಾ ಕಿಶೋರ್, ಲಯನ್ ವಿಜಯ ಶೆಟ್ಟಿ ,ಕಾಲೇಜಿನ ರಾ.ಸೇ.ಯೋ.ಯೋಜನಾಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್.ಉಪಸ್ಥಿತರಿದ್ದರು.


ಕು.ಸಮೀಕ್ಷಾ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಕು.ವೀಕ್ಷಾ ಸಾಲ್ಯಾನ್ ವಂದಿಸಿ,ಕು.ಶ್ರಾವ್ಯ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು