12:58 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಅಂಗಾಂಗದಾನ, ನೇತ್ರದಾನ ಮತ್ತು ನೋಂದಣಿ ಜಾಗೃತಿ ಅಭಿಯಾನ

28/11/2022, 20:35

ಮಂಗಳೂರು(reporterkarnataka.com): “ನಮ್ಮ ಸಮಾಜದಲ್ಲಿ ದಾನ ಎಂಬುದು ಕರುಣೆ,ಪ್ರೀತಿ, ದಯೆ ಮೊದಲಾದ ಮೌಲ್ಯಗಳನ್ನೊಳಗೊಂಡ ನಮಗ್ರ ಆದರ್ಶ. ಈ ಆದರ್ಶವನ್ನು ನಿಸ್ವಾರ್ಥದಿಂದ ಪಾಲಿಸುವವರನ್ನು ಸಮಾಜ ಸರ್ವಕಾಲಕ್ಕೂ ಸ್ಮರಿಸುತ್ತದೆ. ಇಂತಹಾ ಆದರ್ಶವನ್ನು ಪಾಲಿಸಿದ ವ್ಯಕ್ತಿಗಳ ಹಾದಿಯಲ್ಲಿ ನಡೆಯಲು ನಮಗೆ ಅವಕಾಶ ಮಾಡಿಕೊಡುವ ಪುಣ್ಯಕರ ಕಾರ್ಯವೇ ಅಂಗಾಂಗ ದಾನ ಹಾಗೂ ನೇತ್ರದಾನ. ಇನ್ನೊಬ್ಬರ ಜೀವ ಉಳಿಸುವ,ಒಂದಷ್ಟು ಜನರ ಬದುಕಿಗೆ ಬೆಳಕಾಗುವ, ಸಾವಿನ ನಂತರವೂ ಮತ್ತೊಬ್ಬರಿಗೆ ಬದುಕು ನೀಡಿ, ಜನಮಾನಸದಲ್ಲಿ ನಮಗೆ ಬದುಕಲು ಇಂತಹ ದಾನದಿಂದ ಸಾಧ್ಯ. ಹಾಗಾಗಿ ಇದು ಎಲ್ಲಕ್ಕಿಂತ ಶ್ರೇಷ್ಠ ದಾನ.ಈ ರೀತಿಯ ಶ್ರೇಷ್ಠ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಿ ಜಾಗೃತಿ ಕಾರ್ಯ ಕೈಗೊಂಡಾಗ ಮಾತ್ರ ಅಂಗಾಂಗ ಹಾಗೂ ನೇತ್ರದಾನ ಜನರ ಅಭಿಯಾನವಾಗಿ,ಆಂದೋಲನವಾಗಿ ಬದಲಾಗಲು ಸಾಧ್ಯ” ಎಂದು ಅಂಗಾಂಗದಾನದ ಜಿಲ್ಲಾ ಮುಖ್ಯ ಸಂಯೋಜಕ ಲಯನ್ ಫಿಲಿಪ್ ಜೆ.ಪಿರೇರಾ ಹೇಳಿದರು.

ಅವರು ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಹಾಗೂ ಕದ್ರಿಯ ಲಯನ್ಸ್ ಹಾಗೂ ಲಿಯೋ ಕ್ಲಬ್ ನ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ನೇತ್ರದಾನ ಹಾಗೂ ಅಂಗಾಂಗದಾನ ಮತ್ತು ನೋಂದಣಿ ಅಭಿಯಾನದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕದ್ರಿ ಲಯನ್ಸ್ ಕ್ಲಬ್ ನ ಅಧ್ಯಕ್ಷೆ ಲಯನ್ ಸುಮಿತ್ರಾ ಶೆಟ್ಟಿ ಮಾತನಾಡಿ, ಅಂಗಾಂಗ ದಾನದ ಮಹತ್ವವನ್ನು ತಿಳಿಸಿ,ಈ ಒಂದು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಲಯನ್ ಜಯಕುಮಾರಿ ಸತೀಶನ್,ಲಯನ್ ರತ್ನಾಕರ್,ಲಯನ್ ಮಾಲಾ ಕಿಶೋರ್, ಲಯನ್ ವಿಜಯ ಶೆಟ್ಟಿ ,ಕಾಲೇಜಿನ ರಾ.ಸೇ.ಯೋ.ಯೋಜನಾಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್.ಉಪಸ್ಥಿತರಿದ್ದರು.


ಕು.ಸಮೀಕ್ಷಾ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಕು.ವೀಕ್ಷಾ ಸಾಲ್ಯಾನ್ ವಂದಿಸಿ,ಕು.ಶ್ರಾವ್ಯ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು