10:18 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಅಂಗಾಂಗದಾನ, ನೇತ್ರದಾನ ಮತ್ತು ನೋಂದಣಿ ಜಾಗೃತಿ ಅಭಿಯಾನ

28/11/2022, 20:35

ಮಂಗಳೂರು(reporterkarnataka.com): “ನಮ್ಮ ಸಮಾಜದಲ್ಲಿ ದಾನ ಎಂಬುದು ಕರುಣೆ,ಪ್ರೀತಿ, ದಯೆ ಮೊದಲಾದ ಮೌಲ್ಯಗಳನ್ನೊಳಗೊಂಡ ನಮಗ್ರ ಆದರ್ಶ. ಈ ಆದರ್ಶವನ್ನು ನಿಸ್ವಾರ್ಥದಿಂದ ಪಾಲಿಸುವವರನ್ನು ಸಮಾಜ ಸರ್ವಕಾಲಕ್ಕೂ ಸ್ಮರಿಸುತ್ತದೆ. ಇಂತಹಾ ಆದರ್ಶವನ್ನು ಪಾಲಿಸಿದ ವ್ಯಕ್ತಿಗಳ ಹಾದಿಯಲ್ಲಿ ನಡೆಯಲು ನಮಗೆ ಅವಕಾಶ ಮಾಡಿಕೊಡುವ ಪುಣ್ಯಕರ ಕಾರ್ಯವೇ ಅಂಗಾಂಗ ದಾನ ಹಾಗೂ ನೇತ್ರದಾನ. ಇನ್ನೊಬ್ಬರ ಜೀವ ಉಳಿಸುವ,ಒಂದಷ್ಟು ಜನರ ಬದುಕಿಗೆ ಬೆಳಕಾಗುವ, ಸಾವಿನ ನಂತರವೂ ಮತ್ತೊಬ್ಬರಿಗೆ ಬದುಕು ನೀಡಿ, ಜನಮಾನಸದಲ್ಲಿ ನಮಗೆ ಬದುಕಲು ಇಂತಹ ದಾನದಿಂದ ಸಾಧ್ಯ. ಹಾಗಾಗಿ ಇದು ಎಲ್ಲಕ್ಕಿಂತ ಶ್ರೇಷ್ಠ ದಾನ.ಈ ರೀತಿಯ ಶ್ರೇಷ್ಠ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಿ ಜಾಗೃತಿ ಕಾರ್ಯ ಕೈಗೊಂಡಾಗ ಮಾತ್ರ ಅಂಗಾಂಗ ಹಾಗೂ ನೇತ್ರದಾನ ಜನರ ಅಭಿಯಾನವಾಗಿ,ಆಂದೋಲನವಾಗಿ ಬದಲಾಗಲು ಸಾಧ್ಯ” ಎಂದು ಅಂಗಾಂಗದಾನದ ಜಿಲ್ಲಾ ಮುಖ್ಯ ಸಂಯೋಜಕ ಲಯನ್ ಫಿಲಿಪ್ ಜೆ.ಪಿರೇರಾ ಹೇಳಿದರು.

ಅವರು ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಹಾಗೂ ಕದ್ರಿಯ ಲಯನ್ಸ್ ಹಾಗೂ ಲಿಯೋ ಕ್ಲಬ್ ನ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ನೇತ್ರದಾನ ಹಾಗೂ ಅಂಗಾಂಗದಾನ ಮತ್ತು ನೋಂದಣಿ ಅಭಿಯಾನದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕದ್ರಿ ಲಯನ್ಸ್ ಕ್ಲಬ್ ನ ಅಧ್ಯಕ್ಷೆ ಲಯನ್ ಸುಮಿತ್ರಾ ಶೆಟ್ಟಿ ಮಾತನಾಡಿ, ಅಂಗಾಂಗ ದಾನದ ಮಹತ್ವವನ್ನು ತಿಳಿಸಿ,ಈ ಒಂದು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಲಯನ್ ಜಯಕುಮಾರಿ ಸತೀಶನ್,ಲಯನ್ ರತ್ನಾಕರ್,ಲಯನ್ ಮಾಲಾ ಕಿಶೋರ್, ಲಯನ್ ವಿಜಯ ಶೆಟ್ಟಿ ,ಕಾಲೇಜಿನ ರಾ.ಸೇ.ಯೋ.ಯೋಜನಾಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್.ಉಪಸ್ಥಿತರಿದ್ದರು.


ಕು.ಸಮೀಕ್ಷಾ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಕು.ವೀಕ್ಷಾ ಸಾಲ್ಯಾನ್ ವಂದಿಸಿ,ಕು.ಶ್ರಾವ್ಯ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು