3:34 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಅಂಗಾಂಗದಾನ, ನೇತ್ರದಾನ ಮತ್ತು ನೋಂದಣಿ ಜಾಗೃತಿ ಅಭಿಯಾನ

28/11/2022, 20:35

ಮಂಗಳೂರು(reporterkarnataka.com): “ನಮ್ಮ ಸಮಾಜದಲ್ಲಿ ದಾನ ಎಂಬುದು ಕರುಣೆ,ಪ್ರೀತಿ, ದಯೆ ಮೊದಲಾದ ಮೌಲ್ಯಗಳನ್ನೊಳಗೊಂಡ ನಮಗ್ರ ಆದರ್ಶ. ಈ ಆದರ್ಶವನ್ನು ನಿಸ್ವಾರ್ಥದಿಂದ ಪಾಲಿಸುವವರನ್ನು ಸಮಾಜ ಸರ್ವಕಾಲಕ್ಕೂ ಸ್ಮರಿಸುತ್ತದೆ. ಇಂತಹಾ ಆದರ್ಶವನ್ನು ಪಾಲಿಸಿದ ವ್ಯಕ್ತಿಗಳ ಹಾದಿಯಲ್ಲಿ ನಡೆಯಲು ನಮಗೆ ಅವಕಾಶ ಮಾಡಿಕೊಡುವ ಪುಣ್ಯಕರ ಕಾರ್ಯವೇ ಅಂಗಾಂಗ ದಾನ ಹಾಗೂ ನೇತ್ರದಾನ. ಇನ್ನೊಬ್ಬರ ಜೀವ ಉಳಿಸುವ,ಒಂದಷ್ಟು ಜನರ ಬದುಕಿಗೆ ಬೆಳಕಾಗುವ, ಸಾವಿನ ನಂತರವೂ ಮತ್ತೊಬ್ಬರಿಗೆ ಬದುಕು ನೀಡಿ, ಜನಮಾನಸದಲ್ಲಿ ನಮಗೆ ಬದುಕಲು ಇಂತಹ ದಾನದಿಂದ ಸಾಧ್ಯ. ಹಾಗಾಗಿ ಇದು ಎಲ್ಲಕ್ಕಿಂತ ಶ್ರೇಷ್ಠ ದಾನ.ಈ ರೀತಿಯ ಶ್ರೇಷ್ಠ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಿ ಜಾಗೃತಿ ಕಾರ್ಯ ಕೈಗೊಂಡಾಗ ಮಾತ್ರ ಅಂಗಾಂಗ ಹಾಗೂ ನೇತ್ರದಾನ ಜನರ ಅಭಿಯಾನವಾಗಿ,ಆಂದೋಲನವಾಗಿ ಬದಲಾಗಲು ಸಾಧ್ಯ” ಎಂದು ಅಂಗಾಂಗದಾನದ ಜಿಲ್ಲಾ ಮುಖ್ಯ ಸಂಯೋಜಕ ಲಯನ್ ಫಿಲಿಪ್ ಜೆ.ಪಿರೇರಾ ಹೇಳಿದರು.

ಅವರು ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಹಾಗೂ ಕದ್ರಿಯ ಲಯನ್ಸ್ ಹಾಗೂ ಲಿಯೋ ಕ್ಲಬ್ ನ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ನೇತ್ರದಾನ ಹಾಗೂ ಅಂಗಾಂಗದಾನ ಮತ್ತು ನೋಂದಣಿ ಅಭಿಯಾನದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕದ್ರಿ ಲಯನ್ಸ್ ಕ್ಲಬ್ ನ ಅಧ್ಯಕ್ಷೆ ಲಯನ್ ಸುಮಿತ್ರಾ ಶೆಟ್ಟಿ ಮಾತನಾಡಿ, ಅಂಗಾಂಗ ದಾನದ ಮಹತ್ವವನ್ನು ತಿಳಿಸಿ,ಈ ಒಂದು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಲಯನ್ ಜಯಕುಮಾರಿ ಸತೀಶನ್,ಲಯನ್ ರತ್ನಾಕರ್,ಲಯನ್ ಮಾಲಾ ಕಿಶೋರ್, ಲಯನ್ ವಿಜಯ ಶೆಟ್ಟಿ ,ಕಾಲೇಜಿನ ರಾ.ಸೇ.ಯೋ.ಯೋಜನಾಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್.ಉಪಸ್ಥಿತರಿದ್ದರು.


ಕು.ಸಮೀಕ್ಷಾ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಕು.ವೀಕ್ಷಾ ಸಾಲ್ಯಾನ್ ವಂದಿಸಿ,ಕು.ಶ್ರಾವ್ಯ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು