4:57 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಕೊಂಕಣಿ ಸರ್ಟಿಫಿಕೇಟ್ ಕೋರ್ಸ್: ಕೊಂಕಣಿ ಫೋಕ್ ಲೋರ್ ಅಂಡ್ ಡಾನ್ಸ್ ತರಬೇತಿಗೆ ಚಾಲನೆ

03/11/2023, 10:14

ಮಂಗಳೂರು(reporterkarnataka.com): ಕೆನರಾ ಕಾಲೇಜಿನಲ್ಲಿ ಕೊಂಕಣಿ ಭಾಷಾ ವಿದ್ಯಾರ್ಥಿ ಮಂಡಲ ಕೆನರಾ ಕಾಲೇಜು ಹಾಗೂ ಕೊಂಕಣಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕೊಂಕಣಿ ಸ್ನಾತಕೋತ್ತರ ವಿಭಾಗ ಮಂಗಳೂರು ವಿಶ್ವವಿದ್ಯಾಲಯ ಇವುಗಳ ಜಂಟಿ
ಆಶ್ರಯದಲ್ಲಿ ಕೊಂಕಣಿ ಸರ್ಟಿಫಿಕೇಟ್ ಕೋರ್ಸ್, ಕೊಂಕಣಿ ಫೋಕ್ ಲೋರ್ ಅಂಡ್ ಡಾನ್ಸ್ ತರಬೇತಿಗೆ ಡಾ. ದೇವದಾಸ್ ಪೈ ಅವರು ದೀಪ ಬೆಳಗಿಸುವ ಮೂಲಕ ಚಾಲನೆಯನ್ನಿತ್ತರು.
“ಮೂಲತ: ಉತ್ತರ ಭಾರತದ ಸರಸ್ವತಿ ನದಿ ತೀರದವರಾದ ಗೌಡ ಸಾರಸ್ವತ ಬ್ರಾಹ್ಮಣರು ಗೋವಾದಲ್ಲಿ ನೆಲೆ ನಿಂತು ತಮ್ಮ ಸಂಸ್ಕೃತಿ ಆಚಾರ ವಿಚಾರಗಳನ್ನೆಲ್ಲ ಉಳಿಸಿ ಬೆಳೆಸಿಕೊಂಡು ಬರುತ್ತಿದ್ದ ಸಂದರ್ಭದಲ್ಲಿ ವ್ಯಾಪಾರದ ನೆಪವಿಟ್ಟುಕೊಂಡು ಭಾರತಕ್ಕೆ ಆಗಮಿಸಿದ ಪೋರ್ಚುಗೀಸರ ಆಕ್ರಮಣವನ್ನು ತಾಳಲಾರದೆ ಹೆದರಿ ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳ ಬೇಕೆಂಬ ಮಹಾದಾಸೆಯಿಂದ ದಕ್ಷಿಣದ ಕರಾವಳಿ ಪ್ರದೇಶದಲ್ಲಿ ನೆಲೆ ನಿಂತರು. ಇಂದಿಗೂ ಇವರು ತಮ್ಮಆಚಾರ ವಿಚಾರ ಸಂಪ್ರದಾಯಗಳನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿರುವುದು ಗಮನಾರ್ಹ “ಎಂದು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ. ಅವರು ಕೊಂಕಣಿ ಭಾಷೆಯಲ್ಲಿ ಎಂ.ಎ, ಪಿ ಎಚ್ ಡಿ ಪದವಿಯನ್ನು ಮಾಡಿದಲ್ಲಿ ವಿಪುಲ ವೃತ್ತಿಪರ ಅವಕಾಶಗಳು ಇರುವುದು. ಅದಕ್ಕೆ ಇಂತಹ ಸರ್ಟಿಫಿಕೇಟ್ ಕೋರ್ಸ್ ಸ್ಪೂರ್ತಿದಾಯಕವಾಗುವುದು ಎಂದು ನುಡಿದರು.
ಶ್ವೇತಾ ಕಾಮತ್ ಪ್ರಾರ್ಥಿಸಿದರು. ಕೊಂಕಣಿ ಭಾಷಾ ವಿದ್ಯಾರ್ಥಿ ಮಂಡಲ ಹಾಗೂ ಕೊಂಕಣಿ ಕೋರ್ಸ್ ಸಂಯೋಜಕಿಯಾದ ಸುಜಾತಾ ಜಿ.ನಾಯಕ್ ಸ್ವಾಗತಿಸಿದರು. ಸಹ ಸಂಯೋಜಕಿ ಕೀರ್ತನಾ ಎಂ. ಭಟ್ ಅವರು ವಂದಿಸಿದರು. ವರದರಾಜ ಭಕ್ತ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು