11:53 PM Wednesday8 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಕೊಂಕಣಿ ಸರ್ಟಿಫಿಕೇಟ್ ಕೋರ್ಸ್: ಕೊಂಕಣಿ ಫೋಕ್ ಲೋರ್ ಅಂಡ್ ಡಾನ್ಸ್ ತರಬೇತಿಗೆ ಚಾಲನೆ

03/11/2023, 10:14

ಮಂಗಳೂರು(reporterkarnataka.com): ಕೆನರಾ ಕಾಲೇಜಿನಲ್ಲಿ ಕೊಂಕಣಿ ಭಾಷಾ ವಿದ್ಯಾರ್ಥಿ ಮಂಡಲ ಕೆನರಾ ಕಾಲೇಜು ಹಾಗೂ ಕೊಂಕಣಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕೊಂಕಣಿ ಸ್ನಾತಕೋತ್ತರ ವಿಭಾಗ ಮಂಗಳೂರು ವಿಶ್ವವಿದ್ಯಾಲಯ ಇವುಗಳ ಜಂಟಿ
ಆಶ್ರಯದಲ್ಲಿ ಕೊಂಕಣಿ ಸರ್ಟಿಫಿಕೇಟ್ ಕೋರ್ಸ್, ಕೊಂಕಣಿ ಫೋಕ್ ಲೋರ್ ಅಂಡ್ ಡಾನ್ಸ್ ತರಬೇತಿಗೆ ಡಾ. ದೇವದಾಸ್ ಪೈ ಅವರು ದೀಪ ಬೆಳಗಿಸುವ ಮೂಲಕ ಚಾಲನೆಯನ್ನಿತ್ತರು.
“ಮೂಲತ: ಉತ್ತರ ಭಾರತದ ಸರಸ್ವತಿ ನದಿ ತೀರದವರಾದ ಗೌಡ ಸಾರಸ್ವತ ಬ್ರಾಹ್ಮಣರು ಗೋವಾದಲ್ಲಿ ನೆಲೆ ನಿಂತು ತಮ್ಮ ಸಂಸ್ಕೃತಿ ಆಚಾರ ವಿಚಾರಗಳನ್ನೆಲ್ಲ ಉಳಿಸಿ ಬೆಳೆಸಿಕೊಂಡು ಬರುತ್ತಿದ್ದ ಸಂದರ್ಭದಲ್ಲಿ ವ್ಯಾಪಾರದ ನೆಪವಿಟ್ಟುಕೊಂಡು ಭಾರತಕ್ಕೆ ಆಗಮಿಸಿದ ಪೋರ್ಚುಗೀಸರ ಆಕ್ರಮಣವನ್ನು ತಾಳಲಾರದೆ ಹೆದರಿ ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳ ಬೇಕೆಂಬ ಮಹಾದಾಸೆಯಿಂದ ದಕ್ಷಿಣದ ಕರಾವಳಿ ಪ್ರದೇಶದಲ್ಲಿ ನೆಲೆ ನಿಂತರು. ಇಂದಿಗೂ ಇವರು ತಮ್ಮಆಚಾರ ವಿಚಾರ ಸಂಪ್ರದಾಯಗಳನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿರುವುದು ಗಮನಾರ್ಹ “ಎಂದು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ. ಅವರು ಕೊಂಕಣಿ ಭಾಷೆಯಲ್ಲಿ ಎಂ.ಎ, ಪಿ ಎಚ್ ಡಿ ಪದವಿಯನ್ನು ಮಾಡಿದಲ್ಲಿ ವಿಪುಲ ವೃತ್ತಿಪರ ಅವಕಾಶಗಳು ಇರುವುದು. ಅದಕ್ಕೆ ಇಂತಹ ಸರ್ಟಿಫಿಕೇಟ್ ಕೋರ್ಸ್ ಸ್ಪೂರ್ತಿದಾಯಕವಾಗುವುದು ಎಂದು ನುಡಿದರು.
ಶ್ವೇತಾ ಕಾಮತ್ ಪ್ರಾರ್ಥಿಸಿದರು. ಕೊಂಕಣಿ ಭಾಷಾ ವಿದ್ಯಾರ್ಥಿ ಮಂಡಲ ಹಾಗೂ ಕೊಂಕಣಿ ಕೋರ್ಸ್ ಸಂಯೋಜಕಿಯಾದ ಸುಜಾತಾ ಜಿ.ನಾಯಕ್ ಸ್ವಾಗತಿಸಿದರು. ಸಹ ಸಂಯೋಜಕಿ ಕೀರ್ತನಾ ಎಂ. ಭಟ್ ಅವರು ವಂದಿಸಿದರು. ವರದರಾಜ ಭಕ್ತ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು