11:13 AM Saturday23 - August 2025
ಬ್ರೇಕಿಂಗ್ ನ್ಯೂಸ್
ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜು ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಜಾಲ ಗೋಷ್ಠಿ

26/06/2021, 23:39

ಮಂಗಳೂರು(reporterkarnataka news): ಕೆನರಾ ಕಾಲೇಜಿನ ಆಡಳಿತ ವ್ಯವಹಾರ ವಿಭಾಗ ಹಾಗೂ ಕ್ರೀಡಾ ವಿಭಾಗ ಜಂಟಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಾಲ ಗೋಷ್ಠಿಯ ಮೂಲಕ ಆಚರಿಸಲಾಯಿತು.

ಯೋಗ ಹಾಗೂ ಆರೋಗ್ಯ ನಿರ್ವಹಣೆಯ ಬಗ್ಗೆ ಉಪನ್ಯಾಸ ಹಾಗೂ ಸರಳ ಯೋಗ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು,

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ  ಏಕನಾಥ್ ಬಾಳಿಗಾ ಮುಖ್ಯ ಅತಿಥಿಯಾಗಿ ಮಾತನಾಡಿ, ಯೋಗ ನಿರಂತರ ಅಭ್ಯಾಸವೇ ಹೊರತು ಧರ್ಮವಲ್ಲ. ಭಾರತ ಅನೇಕ ಪ್ರಥಮಗಳ ತವರು, ಶೂನ್ಯ, ಯೋಗ, ಆಯುರ್ವೇದ, ಸಂಗೀತ ಕಲೆಗಳ ಉಗಮ ಭಾರತವಾಗಿದ್ದು, ವಿದೇಶಿಗರು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಅಭ್ಯಸಿಸುತ್ತಿದ್ದಾರೆ. ಅವರನ್ನು ಕಂಡು ನಾವು ಕಲಿಯುವ ಸ್ಥಿತಿಗೆ ಬಂದಿರುವುದು ಸರಿಯಲ್ಲ, ದಿನನಿತ್ಯದ ಸರಳ ಯೋಗ, ಧ್ಯಾನ ಇವುಗಳಿಂದ ದೇಹ ಹಾಗೂ ಮನಸ್ಸಿನ ಹತೋಟಿ ಸಾಧ್ಯ, ಹಾಗೂ ಸರಿಯಾದ ಸ್ಥಿರ ಆರೋಗ್ಯಕ್ಕೆ ಇದು ಬುನಾದಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆನರಾ  ಹೈಸ್ಕೂಲ್ ಅಸೋಸಿಯೇಷನ್ ನ ಖಜಾಂಜಿ ಎಂ.  ವಾಮನ ಕಾಮತ್ ಧ್ಯಾನ, ಪ್ರಾಣಾಯಾಮ ಹಾಗೂ ಯೋಗಾಸನಗಳು ತಾರುಣ್ಯ ವೃದ್ಧಿಸುವುದಲ್ಲದೆ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ ಎಂದು ಹೇಳಿದರು.

ಕಾಲೇಜಿನ ಹಳೆ ವಿದ್ಯಾರ್ಥಿಗಳಾಗಿ ಏಕನಾಥ್ ಬಾಳಿಗಾ ಮಾತನಾಡಿ,  ತಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಣ ಮೌಲ್ಯಗಳನ್ನು ಹಂಚುವಲ್ಲಿ ತಮಗಾದ ಸಂತೋಷವನ್ನು ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ ಪ್ರೇಮಲತಾ ವಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. 

ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಪುಷ್ಪಲತಾ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅವಿನಾಶ್ ವಂದಿಸಿದರು. ಉಪನ್ಯಾಸಕಿ ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು