4:04 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕೆನರಾ ಕಾಲೇಜು ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಜಾಲ ಗೋಷ್ಠಿ

26/06/2021, 23:39

ಮಂಗಳೂರು(reporterkarnataka news): ಕೆನರಾ ಕಾಲೇಜಿನ ಆಡಳಿತ ವ್ಯವಹಾರ ವಿಭಾಗ ಹಾಗೂ ಕ್ರೀಡಾ ವಿಭಾಗ ಜಂಟಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಾಲ ಗೋಷ್ಠಿಯ ಮೂಲಕ ಆಚರಿಸಲಾಯಿತು.

ಯೋಗ ಹಾಗೂ ಆರೋಗ್ಯ ನಿರ್ವಹಣೆಯ ಬಗ್ಗೆ ಉಪನ್ಯಾಸ ಹಾಗೂ ಸರಳ ಯೋಗ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು,

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ  ಏಕನಾಥ್ ಬಾಳಿಗಾ ಮುಖ್ಯ ಅತಿಥಿಯಾಗಿ ಮಾತನಾಡಿ, ಯೋಗ ನಿರಂತರ ಅಭ್ಯಾಸವೇ ಹೊರತು ಧರ್ಮವಲ್ಲ. ಭಾರತ ಅನೇಕ ಪ್ರಥಮಗಳ ತವರು, ಶೂನ್ಯ, ಯೋಗ, ಆಯುರ್ವೇದ, ಸಂಗೀತ ಕಲೆಗಳ ಉಗಮ ಭಾರತವಾಗಿದ್ದು, ವಿದೇಶಿಗರು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಅಭ್ಯಸಿಸುತ್ತಿದ್ದಾರೆ. ಅವರನ್ನು ಕಂಡು ನಾವು ಕಲಿಯುವ ಸ್ಥಿತಿಗೆ ಬಂದಿರುವುದು ಸರಿಯಲ್ಲ, ದಿನನಿತ್ಯದ ಸರಳ ಯೋಗ, ಧ್ಯಾನ ಇವುಗಳಿಂದ ದೇಹ ಹಾಗೂ ಮನಸ್ಸಿನ ಹತೋಟಿ ಸಾಧ್ಯ, ಹಾಗೂ ಸರಿಯಾದ ಸ್ಥಿರ ಆರೋಗ್ಯಕ್ಕೆ ಇದು ಬುನಾದಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆನರಾ  ಹೈಸ್ಕೂಲ್ ಅಸೋಸಿಯೇಷನ್ ನ ಖಜಾಂಜಿ ಎಂ.  ವಾಮನ ಕಾಮತ್ ಧ್ಯಾನ, ಪ್ರಾಣಾಯಾಮ ಹಾಗೂ ಯೋಗಾಸನಗಳು ತಾರುಣ್ಯ ವೃದ್ಧಿಸುವುದಲ್ಲದೆ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ ಎಂದು ಹೇಳಿದರು.

ಕಾಲೇಜಿನ ಹಳೆ ವಿದ್ಯಾರ್ಥಿಗಳಾಗಿ ಏಕನಾಥ್ ಬಾಳಿಗಾ ಮಾತನಾಡಿ,  ತಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಣ ಮೌಲ್ಯಗಳನ್ನು ಹಂಚುವಲ್ಲಿ ತಮಗಾದ ಸಂತೋಷವನ್ನು ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ ಪ್ರೇಮಲತಾ ವಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. 

ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಪುಷ್ಪಲತಾ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅವಿನಾಶ್ ವಂದಿಸಿದರು. ಉಪನ್ಯಾಸಕಿ ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು