4:45 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜು ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಜಾಲ ಗೋಷ್ಠಿ

26/06/2021, 23:39

ಮಂಗಳೂರು(reporterkarnataka news): ಕೆನರಾ ಕಾಲೇಜಿನ ಆಡಳಿತ ವ್ಯವಹಾರ ವಿಭಾಗ ಹಾಗೂ ಕ್ರೀಡಾ ವಿಭಾಗ ಜಂಟಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಾಲ ಗೋಷ್ಠಿಯ ಮೂಲಕ ಆಚರಿಸಲಾಯಿತು.

ಯೋಗ ಹಾಗೂ ಆರೋಗ್ಯ ನಿರ್ವಹಣೆಯ ಬಗ್ಗೆ ಉಪನ್ಯಾಸ ಹಾಗೂ ಸರಳ ಯೋಗ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು,

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ  ಏಕನಾಥ್ ಬಾಳಿಗಾ ಮುಖ್ಯ ಅತಿಥಿಯಾಗಿ ಮಾತನಾಡಿ, ಯೋಗ ನಿರಂತರ ಅಭ್ಯಾಸವೇ ಹೊರತು ಧರ್ಮವಲ್ಲ. ಭಾರತ ಅನೇಕ ಪ್ರಥಮಗಳ ತವರು, ಶೂನ್ಯ, ಯೋಗ, ಆಯುರ್ವೇದ, ಸಂಗೀತ ಕಲೆಗಳ ಉಗಮ ಭಾರತವಾಗಿದ್ದು, ವಿದೇಶಿಗರು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಅಭ್ಯಸಿಸುತ್ತಿದ್ದಾರೆ. ಅವರನ್ನು ಕಂಡು ನಾವು ಕಲಿಯುವ ಸ್ಥಿತಿಗೆ ಬಂದಿರುವುದು ಸರಿಯಲ್ಲ, ದಿನನಿತ್ಯದ ಸರಳ ಯೋಗ, ಧ್ಯಾನ ಇವುಗಳಿಂದ ದೇಹ ಹಾಗೂ ಮನಸ್ಸಿನ ಹತೋಟಿ ಸಾಧ್ಯ, ಹಾಗೂ ಸರಿಯಾದ ಸ್ಥಿರ ಆರೋಗ್ಯಕ್ಕೆ ಇದು ಬುನಾದಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆನರಾ  ಹೈಸ್ಕೂಲ್ ಅಸೋಸಿಯೇಷನ್ ನ ಖಜಾಂಜಿ ಎಂ.  ವಾಮನ ಕಾಮತ್ ಧ್ಯಾನ, ಪ್ರಾಣಾಯಾಮ ಹಾಗೂ ಯೋಗಾಸನಗಳು ತಾರುಣ್ಯ ವೃದ್ಧಿಸುವುದಲ್ಲದೆ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ ಎಂದು ಹೇಳಿದರು.

ಕಾಲೇಜಿನ ಹಳೆ ವಿದ್ಯಾರ್ಥಿಗಳಾಗಿ ಏಕನಾಥ್ ಬಾಳಿಗಾ ಮಾತನಾಡಿ,  ತಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಣ ಮೌಲ್ಯಗಳನ್ನು ಹಂಚುವಲ್ಲಿ ತಮಗಾದ ಸಂತೋಷವನ್ನು ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ ಪ್ರೇಮಲತಾ ವಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. 

ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಪುಷ್ಪಲತಾ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅವಿನಾಶ್ ವಂದಿಸಿದರು. ಉಪನ್ಯಾಸಕಿ ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು