12:15 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜು ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಜಾಲ ಗೋಷ್ಠಿ

26/06/2021, 23:39

ಮಂಗಳೂರು(reporterkarnataka news): ಕೆನರಾ ಕಾಲೇಜಿನ ಆಡಳಿತ ವ್ಯವಹಾರ ವಿಭಾಗ ಹಾಗೂ ಕ್ರೀಡಾ ವಿಭಾಗ ಜಂಟಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಾಲ ಗೋಷ್ಠಿಯ ಮೂಲಕ ಆಚರಿಸಲಾಯಿತು.

ಯೋಗ ಹಾಗೂ ಆರೋಗ್ಯ ನಿರ್ವಹಣೆಯ ಬಗ್ಗೆ ಉಪನ್ಯಾಸ ಹಾಗೂ ಸರಳ ಯೋಗ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು,

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ  ಏಕನಾಥ್ ಬಾಳಿಗಾ ಮುಖ್ಯ ಅತಿಥಿಯಾಗಿ ಮಾತನಾಡಿ, ಯೋಗ ನಿರಂತರ ಅಭ್ಯಾಸವೇ ಹೊರತು ಧರ್ಮವಲ್ಲ. ಭಾರತ ಅನೇಕ ಪ್ರಥಮಗಳ ತವರು, ಶೂನ್ಯ, ಯೋಗ, ಆಯುರ್ವೇದ, ಸಂಗೀತ ಕಲೆಗಳ ಉಗಮ ಭಾರತವಾಗಿದ್ದು, ವಿದೇಶಿಗರು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಅಭ್ಯಸಿಸುತ್ತಿದ್ದಾರೆ. ಅವರನ್ನು ಕಂಡು ನಾವು ಕಲಿಯುವ ಸ್ಥಿತಿಗೆ ಬಂದಿರುವುದು ಸರಿಯಲ್ಲ, ದಿನನಿತ್ಯದ ಸರಳ ಯೋಗ, ಧ್ಯಾನ ಇವುಗಳಿಂದ ದೇಹ ಹಾಗೂ ಮನಸ್ಸಿನ ಹತೋಟಿ ಸಾಧ್ಯ, ಹಾಗೂ ಸರಿಯಾದ ಸ್ಥಿರ ಆರೋಗ್ಯಕ್ಕೆ ಇದು ಬುನಾದಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆನರಾ  ಹೈಸ್ಕೂಲ್ ಅಸೋಸಿಯೇಷನ್ ನ ಖಜಾಂಜಿ ಎಂ.  ವಾಮನ ಕಾಮತ್ ಧ್ಯಾನ, ಪ್ರಾಣಾಯಾಮ ಹಾಗೂ ಯೋಗಾಸನಗಳು ತಾರುಣ್ಯ ವೃದ್ಧಿಸುವುದಲ್ಲದೆ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ ಎಂದು ಹೇಳಿದರು.

ಕಾಲೇಜಿನ ಹಳೆ ವಿದ್ಯಾರ್ಥಿಗಳಾಗಿ ಏಕನಾಥ್ ಬಾಳಿಗಾ ಮಾತನಾಡಿ,  ತಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಣ ಮೌಲ್ಯಗಳನ್ನು ಹಂಚುವಲ್ಲಿ ತಮಗಾದ ಸಂತೋಷವನ್ನು ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ ಪ್ರೇಮಲತಾ ವಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. 

ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಪುಷ್ಪಲತಾ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅವಿನಾಶ್ ವಂದಿಸಿದರು. ಉಪನ್ಯಾಸಕಿ ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು