7:51 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜು ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಜಾಲ ಗೋಷ್ಠಿ

26/06/2021, 23:39

ಮಂಗಳೂರು(reporterkarnataka news): ಕೆನರಾ ಕಾಲೇಜಿನ ಆಡಳಿತ ವ್ಯವಹಾರ ವಿಭಾಗ ಹಾಗೂ ಕ್ರೀಡಾ ವಿಭಾಗ ಜಂಟಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಾಲ ಗೋಷ್ಠಿಯ ಮೂಲಕ ಆಚರಿಸಲಾಯಿತು.

ಯೋಗ ಹಾಗೂ ಆರೋಗ್ಯ ನಿರ್ವಹಣೆಯ ಬಗ್ಗೆ ಉಪನ್ಯಾಸ ಹಾಗೂ ಸರಳ ಯೋಗ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು,

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ  ಏಕನಾಥ್ ಬಾಳಿಗಾ ಮುಖ್ಯ ಅತಿಥಿಯಾಗಿ ಮಾತನಾಡಿ, ಯೋಗ ನಿರಂತರ ಅಭ್ಯಾಸವೇ ಹೊರತು ಧರ್ಮವಲ್ಲ. ಭಾರತ ಅನೇಕ ಪ್ರಥಮಗಳ ತವರು, ಶೂನ್ಯ, ಯೋಗ, ಆಯುರ್ವೇದ, ಸಂಗೀತ ಕಲೆಗಳ ಉಗಮ ಭಾರತವಾಗಿದ್ದು, ವಿದೇಶಿಗರು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಅಭ್ಯಸಿಸುತ್ತಿದ್ದಾರೆ. ಅವರನ್ನು ಕಂಡು ನಾವು ಕಲಿಯುವ ಸ್ಥಿತಿಗೆ ಬಂದಿರುವುದು ಸರಿಯಲ್ಲ, ದಿನನಿತ್ಯದ ಸರಳ ಯೋಗ, ಧ್ಯಾನ ಇವುಗಳಿಂದ ದೇಹ ಹಾಗೂ ಮನಸ್ಸಿನ ಹತೋಟಿ ಸಾಧ್ಯ, ಹಾಗೂ ಸರಿಯಾದ ಸ್ಥಿರ ಆರೋಗ್ಯಕ್ಕೆ ಇದು ಬುನಾದಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆನರಾ  ಹೈಸ್ಕೂಲ್ ಅಸೋಸಿಯೇಷನ್ ನ ಖಜಾಂಜಿ ಎಂ.  ವಾಮನ ಕಾಮತ್ ಧ್ಯಾನ, ಪ್ರಾಣಾಯಾಮ ಹಾಗೂ ಯೋಗಾಸನಗಳು ತಾರುಣ್ಯ ವೃದ್ಧಿಸುವುದಲ್ಲದೆ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ ಎಂದು ಹೇಳಿದರು.

ಕಾಲೇಜಿನ ಹಳೆ ವಿದ್ಯಾರ್ಥಿಗಳಾಗಿ ಏಕನಾಥ್ ಬಾಳಿಗಾ ಮಾತನಾಡಿ,  ತಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಣ ಮೌಲ್ಯಗಳನ್ನು ಹಂಚುವಲ್ಲಿ ತಮಗಾದ ಸಂತೋಷವನ್ನು ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ ಪ್ರೇಮಲತಾ ವಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. 

ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಪುಷ್ಪಲತಾ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅವಿನಾಶ್ ವಂದಿಸಿದರು. ಉಪನ್ಯಾಸಕಿ ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು