9:05 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೆನರಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ:ಅಮ್ಮೆಂಬಳ ಸುಬ್ಬರಾವ್ ಪ್ರತಿಮೆಗೆ ಪುಷ್ಪ ನಮನ

20/11/2021, 16:07

ಚಿತ್ರ; ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com): ನಗರದ ಹೃದಯ ಭಾಗವಾದ ಕೆನರಾ ಶಾಲಾ ಆವರಣದಲ್ಲಿ ಕೆನರಾ ಸಮೂಹ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. 

ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್ ಸರ್ಕ ಲ್ ಆಫೀ ಸ್ ನ  ಜನರಲ್ ಮ್ಯಾನೇಜರ್ ಯೋಗೀ ಶ ಆಚಾರ್ಯ  ಅವರು ಧ್ವಜಾರೋಹಣ ನೆರವೇರಿಸಿದರು. ಅಮ್ಮೆಂಬಳ ಸುಬ್ಬರಾವ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅವರು ತಮ್ಮ ಅತಿಥಿಗಳು ಸಭೆಯನ್ನು ದ್ದೇಶಿಸಿ ಮಾತನಾಡಿ ಕೆನರಾ ಸಂಸ್ಥೆಯ ಹೆಮ್ಮೆ ಯ ಸಂಸ್ಥಾಪಕರಾದ

ಅಮ್ಮೆಂಬಳ ಸುಬ್ಬರಾವ್ ಪೈ ಅವರ ಸಾಮಾಜಮುಖಿ ಸೇವೆ ಹಾಗೂ ಸಾಧನೆಯನ್ನು ವಿದ್ಯಾ ರ್ಥಿಗಳು ಎಂದೆಂದಿಗೂ ನೆನಪಿನಲ್ಲಿರಿಸುವುದು ಅತಿ ಮುಖ್ಯ ಎಂದರು.

ಈ ಸಂದರ್ಭ ಕೆನರಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ. ಅಣ್ಣಪ್ಪ ಪೈ, ಕಾರ್ಯದರ್ಶಿ ಗಳಾದ ಎಂ. ರಂಗನಾಥ ಭಟ್, ಅಮ್ಮೆಂಬಳ ಸುಬ್ಬ ರಾವ್ ಪೈ ಮೆಮೋರಿಯಲ್ ಫಂಡ್  ಅಧ್ಯಕ್ಷ ಆರ್. ಎನ್. ಸುಜೀರ್, ಕಾರ್ಯ ದರ್ಶಿ ಶ್ರೀನಿವಾಸ ಕಾಮತ್, ಕೆನರಾ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಮುಖ್ಯ ಅಧ್ಯಾಪಕರು, ಶಿಕ್ಷಕ -ಶಿಕ್ಷಕೇತರ ವೃಂದದವರು, ವಿದ್ಯಾ ರ್ಥಿ ಗಳು ಹಾಗೂ ಅವರ ಪಾಲಕರು ಉಪಸ್ಥಿತರಿದ್ದರು.

ಈ ಸಂದರ್ಭ 2019 – 20 ಹಾಗೂ 2020 – 21ನೇ ಸಾಲಿನ ಶೈ ಕ್ಷಣಿಕ ಹಾಗೂ ಇತರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾ ರ್ಥಿಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕೆನರಾ ಹೈಸ್ಕೂಲ್ ಸಿಬಿಎಸ್ಇ  ಪ್ರಾಂಶುಪಾಲರಾದ ಅಕ್ಷತಾ ಶೆಣೈ ನೆರೆದಿರುವ ಅತಿಥಿ ಅಭ್ಯಾಗತರನ್ನು ಸ್ವಾ ಗತಿಸಿದರು. ಕೆನರಾ ಹೈ ಸ್ಕೂ ಲ್ ಇದರ ಮುಖ್ಯ ಶಿಕ್ಷಕರಾದ ಅರುಣಾ ಕುಮಾರಿ ಅವರು ಅಮ್ಮೆಂಬಳ ಸುಬ್ಬರಾವ್ ಪೈ ಇವರ ಬಗ್ಗೆ ಮಾತನಾಡಿದರು. ಕೆನರಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ

ಪ್ರಾಧ್ಯಾಪಕಿ ಕವಿತಾ ಮೌರ್ಯ ವಂದಿಸಿದರು. ಶಾಲಾ ಶಿಕ್ಷಕಿಯರಾದ ಪದ್ಮಿನಿ ರಾವ್ ,ಸುಶ್ಮಿತಾ ಕಾಮತ್,  ಮಮತಾ ಹಾಗೂ ಪಾರ್ವತಿ ಕಾರ್ಯಕ್ರಮಗಳನ್ನು ನಿರ್ವ ಹಿಸಿದರು.

 

ಇತ್ತೀಚಿನ ಸುದ್ದಿ

ಜಾಹೀರಾತು