9:39 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕಾರು ಅಡ್ಡಗಟ್ಟಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಕೊಲೆ ಬೆದರಿಕೆ: ಆರೋಪಿ ಶಂಶುದ್ದೀನ್ ಬಂಧನ

17/07/2022, 11:58

ಮಂಗಳೂರು( reporterkaranataka.com): ನಗರದ ಹೊರವಲಯದ ತುಂಬೆ ಬಳಿ ದ.ಕ. ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರಿನ ಗಾಜು ಪುಡಿಮಾಡಿ ಅಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಿಂದ ಪುತ್ತೂರಿಗೆ ಜಿಲ್ಲಾ ಪಂಚಾಯಿತಿ ವಾಹನ ವೊಂದರಲ್ಲಿ ಚಾಲಕ ದೇವದಾಸ್ ಅವರು ಅಧಿಕಾರಿಗಳನ್ನು ಕರೆದ್ಯೋತ್ತಿದ್ದರು. ಆ ವೇಳೆ ತುಂಬೆ ಸಮೀಪ ಜಿಲ್ಲಾ ಪಂಚಾಯಿತಿ ಕಾರಿನ ಮುಂಭಾಗದ ವಾಹನ ಬ್ರೇಕ್ ಹಾಕಿದ್ದಾರೆ. ಅ ವೇಳೆ ಜಿಪಂ ವಾಹನ ಚಾಲಕ  ಕೂಡ ಬೇಕ್ ಹಾಕಿದ್ದಾರೆ. ಅದೇ ಸಮಯದಲ್ಲಿ ಹಿಂದಿನಿಂದ ವೇಗವಾಗಿ ಬಂದ ದ್ವಿಚಕ್ರ ವಾಹನ ಸವಾರ ಶಂಸುದೀನ್ ಕೂಡ ಬೇಕ್ ಹಾಕಿದ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದರು. ಇದರಿಂದ ಕೋಪಗೊಂಡ ಆತ ದ್ವಿಚಕ್ರ ವಾಹನವನ್ನು ಕಾರಿಗೆ ಅಡ್ಡ ಗಟ್ಟಿ, ಕಾರಿನ ಮಿರರ್ ಅನ್ನು ಪುಡಿ ಮಾಡಿದ್ದಲ್ಲದೆ, ವಾಹನ ಚಾಲಕನನ್ನು ಹಾಗೂ ಮಹಿಳಾ ಅಧಿಕಾರಿಗಳಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ  ಸಜೀಪ ಕೊಣೆಮಾರ್ ನಿವಾಸಿ ಸಂಶುದೀನ್  ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು